ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣ: ಕೆ.ಜೆ. ಜಾರ್ಜ್​​ಗೆ ರಿಲೀಫ್; ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್​​

ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣ: ಕೆ.ಜೆ. ಜಾರ್ಜ್​​ಗೆ ರಿಲೀಫ್; ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್​​


ಬೆಂಗಳೂರು, ಡಿಸೆಂಬರ್ 02: ಬಿಜೆಪಿ ಮಾಡಿದ್ದ ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ ಆರೋಪ ವಿಚಾರವಾಗಿ ಸಚಿವ ಕೆ.ಜೆ.ಜಾರ್ಜ್ಗೆ ರಿಲೀಫ್ ಸಿಕ್ಕಿದೆ. ಸಚಿವ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿ ನ್ಯಾ.ಎಂ.ಐ.ಅರುಣ್ ಅವರಿದ್ದ ಪೀಠವನ್ನು ಸ್ಥಾಪಿಸಲಾಗಿದೆ. ಆ ಮೂಲಕ ಅಧಿಕಾರಿಗಳಾದ ಗೌರವ ಗುಪ್ತಾ, ಮಹಾಂತೇಶ ಬೀಳಗಿ, ಹೆಚ್.ಜೆ.ರಮೇಶ್ ವಿರುದ್ಧ ಕೇಸು ಕೂಡ ರದ್ದಾಗಿದೆ.

ಬಿಜೆಪಿ ನಾಯಕರಿಗೆ ಹಿನ್ನಡೆ

ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇತರೆ ಕಂಪನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲಿಕಲ್ಸ್ ಗುತ್ತಿಗೆ ನೀಡಲಾಗಿದೆ. ಈ ಕಂಪನಿಗಾಗಿ ಇತರ ಕಂಪನಿಗಳ ಟೆಂಡರ್‌ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಬೇರೆ ರಾಜ್ಯಗಳಲ್ಲಿ 900 ರೂಪಾಯಿಗಳಿಗೆ ಸಿಗುವ ಸ್ಮಾರ್ಟ್ ಮೀಟರ್ ಅಂದರೆ 5 ಸಾವಿರದಿಂದ 10 ಸಾವಿರ ರೂಪಾಯಿಗಳಿಗೆ ನೀಡಲಾಗುತ್ತಿದೆ. ಹೀಗಾಗಿ ದೊಡ್ಡ ಹಗರಣ ಎಂದು ಆರೋಪಿಸಲಾಯಿತು.

ಇದನ್ನೂ ಓದಿ: ಸ್ಮಾರ್ಟ್ ಹಗರಣ ಆರೋಪ; ಊಹಾಪೋಹಗಳಿಗೆ ಕೆಪಿಟಿಸಿಎಲ್ ಎಂಡಿ ಸ್ಪಷ್ಟನೆ

ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಇಲಿಕಲ್ಸ್‌ಗೆ ಟೆಂಡರ್ ನೀಡಲಾಗುತ್ತದೆ. 10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ಟೆಂಡರ್ ನೀಡಬೇಕೆಂದರೆ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಅನ್ವಯವಾದರೂ ಇತರೆ ಎಸ್ಕಾಂಗಳಿಗೆ ಇದೇ ಸ್ಮಾರ್ಟ್ ಮೀಟರ್ ಖರೀದಿಸಲು ಸೂಚಿಸಲಾಗಿದೆ. ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್ಡಿಎಸ್‌ಎಸ್ ಯೋಜನೆ 900 ರೂ.ಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂಪಾಯಿಗಳಿಗೆ ಗ್ರಾಹಕರು ಖರೀದಿಸಬೇಕಾಗಿದೆ. ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು. ಆದರೆ, ಬಿಜೆಪಿ ನಾಯಕರು ಪ್ರಕರಣವನ್ನು ರದ್ದುಗೊಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 11:45 am, ಮಂಗಳವಾರ, 2 ಡಿಸೆಂಬರ್ 25





Source link

Leave a Reply

Your email address will not be published. Required fields are marked *