ಮೈಸೂರು, (ಫೆಬ್ರವರಿ 20):ಮುಂಬಡ್ತಿ ಪಡೆಯಲು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ನಟೇಶ್ 1.60 ಕೋಟಿ ಲಂಚ ಕೊಟ್ಟಿದ್ದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ರು.. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಈ ಬಗ್ಗೆ ಜಾರಿ ನಿರ್ದೇಶಾಲಯ ಹಾಗೂ ಆದಾಯ ತೆರಿಗೆ ಇಲಾಖೆಗೂ ದೂರು ನೀಡಿದ್ರು. ಇದರಲ್ಲೇ ಮಾನಹಾನಿ ಪ್ರಕರಣದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿಯ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಯಿ ಕೃಷ್ಣನನ್ನು ಬಂಧಿಸಿ ವಿಚಾರಣೆ. ಇನ್ನು ಮೈಸೂರು ನಿವಾಸದ ಮೇಲೆ ಬೆಂಗಳೂರು ಸಿಸಿಬಿ ದಾಳಿ ಮಾಡಿದ್ದು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಇನ್ನು ಮನೆಯಲ್ಲಿ ಸಿಸಿಬಿಗೆ ಏನೆಲ್ಲಾ ಸಿಕ್ತು ಎನ್ನುವುದನ್ನುಸ್ನೇಹಮಯಿ ಕೃಷ್ಣ ಅವರ ತಾಯಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.