ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್


ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ಬೆಂಗಳೂರು, (ಮಾರ್ಚ್ 18): ರಾಜಧಾನಿ ಬೆಂಗಳೂರಿನಲ್ಲಿ (ಬೆಂಗಳೂರು) ನಿನ್ನೆ (ಮಾರ್ಚ್ 17) ವರ್ಷದ ಮಳೆ, ಇಂದು (ಮಾರ್ಚ್ 18) ಸಹ ಮಳೆಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಸುತ್ತಮುತ್ತ ಭಾರೀ ಆಲಿಕಲ್ಲು ಮಳೆಯಾಗುತ್ತಿದೆ. ಈ ಮಳೆ ನೀರು ನುಗ್ಗಿ ನಿಲ್ಥಾಣ ಸೇರಿದಂತೆ ಹೆದ್ದಾರಿಯಲ್ಲಿ ಜನರ ಪರದಾಡುತ್ತಿದೆ. ಇನ್ನು ಭಾರೀ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ) ಆಗಮಿಸಬೇಕಿದ್ದ 20ಕ್ಕೂ ಅಧಿಕ ವಿಮಾನಗಳು ಡೈವರ್ಟ್ ವಿಮಾನಗಳನ್ನು ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡಿಗೆ ಡೈವರ್ಟ್ ಮಾಡಲಾಗಿದೆ.

ಬೆಂಗಳೂರಿಗೆ ಬರುತ್ತಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ಸಂಜೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದರಿಂದ ಮುಂಜಾಗ್ರತಾವಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 20ಕ್ಕೂ ಅಧಿಕ ವಿಮಾನಗಳು ಬೇರೆ ಕಡೆ ಡೈವರ್ಟ್ ಆಗಿದ್ದವು. ಬೇರೆ ಕಡೆಯಿಂದ ಬರುತ್ತಿದ್ದ ವಿಮಾನಗಳು ಪಕ್ಕದ ಚೆನ್ನೈ, ಹೈದರಾಬಾದ್, ಮಂಗಳೂರು, ಗುವಾಹಟಿ, ಪುಕೆಟ್, ಪಾಟ್ನಾ, ಲಕ್ನೋ, ಚಂಡಿಗಡ್, ಶ್ರೀನಗರ, ದೆಹಲಿ, ಇಂಪಾಲ್, ಕೊಚ್ಚಿಗೆ ಡೈವರ್ಟ್ ಮಾಡಲಾಗಿದೆ.

ಇದನ್ನೂ ನೋಡಿ: ನೆಲಮಂಗಲದಲ್ಲಿ ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನಗಳು ಚನ್ನಾಗಿವೆ

ಇನ್ನು ರಾಷ್ಟ್ರರಾಜಧಾನಿ ಬೆಂಗಳೂರಿನಲ್ಲಿ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಚೆನ್ನೈಗೆ ಮಾರ್ಗ ಬದಲಾವಣೆಯಾಗಿದೆ. ಬುಧವಾರ ಸಂಜೆ 5ರ ಮೇಲೆ ದೆಹಲಿಯಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಒಟ್ಟು ಹದಿನೈದು ವಿಮಾನಗಳು ಚೆನ್ನೈಗೆ ಡೈವರ್ಟ್ ಮಾಡಲಾಗಿದೆ.

ಇನ್ನು ಮಳೆಯಿಂದಾಗಿ ಲ್ಯಾಂಡಿಂಗ್ ಸಮಸ್ಯೆ ಹಾಗೂ ಏರ್ ಟ್ರಾಪಿಕ್ ನಿಂದ ವಿಮಾನಗಳ ಡೈವರ್ಟ್ ಮಾಡಲಾಗಿದೆ. ಇನ್ನು 30ಕ್ಕೂ ಅಧಿಕ ವಿಮಾನಗಳ ಟೇಕ್ ಆಫ್ ಹಾಗೂ ಲ್ಯಾಂಡಿಂಗ್ ಡಿಲೆಯಾಗಿದೆ. ಇದರಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕರು ಪರದಾಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *