ಬೆಂಗಳೂರು, (ಡಿಸೆಂಬರ್ 14): ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ, ಭಾರತದ ಹಿರಿಯ ಶಾಸಕ ಎನ್ನಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು (94) ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ (ಡಿಸೆಂಬರ್ 14) ಕೊನೆಯುಸಿರೆಳೆದಿದ್ದಾರೆ.
ಇನ್ನು ನಿಧನದ ಬಗ್ಗೆ ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥ, ಅಳಿಯ ಆಗಿರುವ ಡಾ.ಶಾರಣ್ ಶಿವರಾಜ್ ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಅಕ್ಟೋಬರ್ 23 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಂದು 6:20ಕ್ಕೆ ನಿಧನರಾದರು. ಆಸ್ಪತ್ರೆ ಕಡೆಯಿಂದ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅವರ ಮಗ ಬಂದ ನಂತರ ಮುಂದಿನ ನಿರ್ಧಾರ ಮಾಡಲಾಗುತ್ತೆ ಎಂದು ತಮ್ಮ ಮಾವನ ಸಾವಿನ ಬಗ್ಗೆ ಮಾಹಿತಿ ತೋರಿಸಿದೆ.