
ಬೆಂಗಳೂರು, ಮಾರ್ಚ್ 16: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಬಗ್ಗೆ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸದನದಲ್ಲಿ ಸರ್ಕಾರದ ಪರವಾಗಿ ಮಾತನಾಡಿದ್ದು, ಈ ವಿಷಯವನ್ನು ಸರ್ಕಾರವು ಬಹಳ ಗಂಭೀರವಾಗಿ ಪರಿಗಣಿಸಿದೆ. ಸ್ಪೀಕರ್ ಅವರ ಪೀಠದಿಂದ ಈ ಮಾತು ಬಂದ ಮೇಲೆ ಸರ್ಕಾರ ಇದನ್ನು ಸ್ವಾಭಾವಿಕವಾಗಿ ಗಂಭೀರವಾಗಿ ಪರಿಗಣಿಸುವುದು ಅನಿವಾರ್ಯ. ಇಲಾಖೆಯಲ್ಲಿ 90 ಪ್ರಶ್ನೆಗಳಿಗೆ ಕೇವಲ 20 ಉತ್ತರಗಳು ಮಾತ್ರ ಬಂದಿರುವುದು ಸೇರಿದಂತೆ ಹಲವು ಇಲಾಖೆಗಳಲ್ಲಿ ಇರುವ ಪರಿಸ್ಥಿತಿಯ ಬಗ್ಗೆ ಪರಿಶೀಲಿಸಲಾಗಿದೆ. ಇಲ್ಲ, ಸರ್ಕಾರದ ಪರವಾಗಿ ಮತ್ತು ಮುಖ್ಯಮಂತ್ರಿಗಳ ಪರವಾಗಿ ಮುಂದಿನ ದಿನಗಳಲ್ಲಿ ಇಂತಹ ಬೆಳವಣಿಗೆ ಮರುಕಳಿಸದಂತೆ ಭರವಸೆ ನೀಡುತ್ತೇನೆ. ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಲು ಕ್ರಮ ಕೈಗೊಳ್ಳಲಾಗುವುದು ಪರಮೇಶ್ವರ್.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.