
ಹಾವೇರಿ, (ಮಾರ್ಚ್ 26): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (ದಾವಣಗೆರೆ ದಕ್ಷಿಣ ಉಪಚುನಾವಣೆ) ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಗೆ (ಕಾಂಗ್ರೆಸ್) ಮುಸ್ಲಿಂ ಸಮುದಾಯದ ಮತಗಳು ಕೈತಪ್ಪುವ ಭಯ ಶುರುವಾಗಿದೆ. ಯಾಕಂದ್ರೆ, ಟಿಕೆಟ್ ಕೈತಪ್ಪಿದ ಮುಸ್ಲಿಂ ನಾಯಕರು ಬಂಡಾಯ ಎದ್ದಿದ್ದು, ಇದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ಗೆ ಆತಂಕ ತಂದಿದೆ. ಇದರ ಮಧ್ಯೆ ಮತ್ತೊಂದೆಡೆ ಶ್ರೀಶೈಲ ಜಗದ್ಗುರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆ ಬೆಂಬಲಿಸುವಂತೆ ಭಕ್ತರಿಗೆ ಕರೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್ಗೆ ಆನೆಬಲ ಬಂದಂತಾಗಿದೆ.
ಹಾವೇರಿಯ ರಾಣೇಬೆನ್ನೂರು ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ಮಾತನಾಡುತ್ತಿರುವ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ, ಸಮಾಜದಲ್ಲಿ ಯಾವುದೇ ವ್ಯಕ್ತಿ ಪಕ್ಷದಿಂದ ಕೂಡಿದೆ. ಸಮಾಜದವರೆಲ್ಲರೂ ಬೆಂಬಲಿಸೋದು ಅವರ ಆದ್ಯ ಕರ್ತವ್ಯ. ಶಾಮನೂರು ಶಂಕರಪ್ಪ ಸಮಾಜದ ಒಗ್ಗಟ್ಟಿಗೆ ಶಿವ ಶ್ರಮಿಸಿದ್ದಾರೆ. ಅಖಿಲ ಭಾರತ ವೀರಶೈವಸಂಘವನ್ನು ಸುಧೀರ್ಘವಾಗಿ ಮುನ್ನಡೆಸಿದ್ದಾರೆ. ಅವರ ಮೊಮ್ಮಗ ಈಗ ಚುನಾವಣಾ ಎದುರಿಸ್ತಿದ್ದಾರೆ. ಅವರಿಗೆ ಬೆಂಬಲಿಸಬೇಕು ಅಂತೇಳಿ ಸಮಾಜದವರಿಗೆ ಹೇಳಲು ಬಯಸ್ತೀನಿ ಎಂದು ಕರೆ ಮಾಡಿ.