ಹಾಸನ, ಅಕ್ಟೋಬರ್ 19: ಹಾಸನಾಂಬೆಯ ದರ್ಶನಕ್ಕೆ ರಾಜ್ಯದೆಲ್ಲೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ದರ್ಶನದ ವೇಳೆ ಕಾಲ್ತುಳಿತ ಸಂಭವಿಸಬಹುದು ಎಂಬ ಭಯ ಉಂಟಾಗುತ್ತಿದೆ. ಈ ಕುರಿತು ಹಾಸನ ಡಿಸಿಗೆ ಪತ್ರ ಬರೆದಿರುವ ಎಸ್ಪಿ, ವಿಶೇಷ ಬಸ್ ವ್ಯವಸ್ಥೆ ರದ್ದು ಮಾಡುವಂತೆ ಕೋರಿದ್ದಾರೆ. ವಿಶೇಷ ಬಸ್ ಸೌಲಭ್ಯಕ್ಕಾಗಿ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಕಾಲ್ತುಳಿತದಂತಹ ಅನಾಹುತಗಳು ಸಂಭವಿಸುವ ಸಾಧ್ಯತೆಯಿದೆ. ಒಂದು ವೇಳೆ ಹಾಗೇನಾದರೂ ಆದರೆ ನಾವು ಹೊಣೆಯಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.