ಶಿವಮೊಗ್ಗ, ಡಿಸೆಂಬರ್ 9: ಹಂದಿ ಹಿಡಿಯಲು ಬಂದ ಯುವಕರ ಗುಂಪು ಬಲೆ ಹಾಕಿ ಬೀದಿ ನಾಯಿಯನ್ನು ಹಿಡಿದು ಕ್ರೂರವಾಗಿ ಬಡಿದು ಕೊಂದ ಘಟನೆ ಶಿವಮೊಗ್ಗದ ಗೋಪಾಲ ಪೊಲೀಸ್ ಬಡಾವಣೆಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬೀದಿನಾಯಿ ಹಂದಿಮರಿಗಳನ್ನು ಹಿಡಿದು ತಿಂದು ಹಾಕಿದೆ ಎಂದು ಯುವಕರು ಸಿಟ್ಟಿಗೆದ್ದಿದ್ದು, ಬಲೆ ಹಾಕಿ ನಾಯಿಯನ್ನು ಹಿಡಿದು ಕೊಲೆ ಮಾಡಿದ್ದಾರೆ. ಇಡೀ ಘಟನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದುಷ್ಕೃತ್ಯದ ವಿರುದ್ಧ ಪ್ರಾಣಿ ರಕ್ಷಣಾ ಸೇವೆ ತಂಡದವರು ತುಂಗಾ ನಗರ ಠಾಣೆಗೆ ದೂರು ನೀಡಿದ್ದು, ಎಫ್ ಐಆರ್ ದಾಖಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ