
<p>ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀಮತಿ ಸುಧಾ ಮೂರ್ತಿಯವರು ರಾಯರ ಬೃಂದಾವನಕ್ಕೆ ಆಗಮಿಸಿ ದರ್ಶನ ಪಡೆದರು.</p><img><p> ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಇಂದು ರಾಯರ ಬೃಂದಾವನದಲ್ಲಿ ಭಕ್ತಿಯಿಂದ ಪೂಜಾ ಕಾರ್ಯಗಳು ಜರಗಿದವು. ಈ ಸಂದರ್ಭದಲ್ಲಿ ಖ್ಯಾತ ಸಮಾಜಸೇವಕಿ ಹಾಗೂ ಲೇಖಕಿ ಶ್ರೀಮತಿ ಸುಧಾ ಮೂರ್ತಿಯವರು ಗುರುರಾಯರ ಸನ್ನಿಧಿಗೆ ಆಗಮಿಸಿ ದರ್ಶನ ಪಡೆದರು.</p><img><p>ಆರಾಧನಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ರಾಯರ ಬೃಂದಾವನದಲ್ಲಿ ಪಂಚಾಮೃತ ಅಭಿಷೇಕ ಹಾಗೂ ಐದು ತರದ ಹಣ್ಣುಗಳಿಂದ ಅಭಿಷೇಕ ನೆರವೇರಿಸಲಾಯಿತು. ಅನಂತರ ಭಕ್ತರು ಸನ್ನಿಧಿಯಲ್ಲಿ ಸಂಕಲ್ಪ ಮಾಡಿಕೊಂಡು ಗುರುಪಾದಪೂಜೆ ಸಲ್ಲಿಸಿ, ಫಲ ಮಂತ್ರಾಕ್ಷತೆ ಸ್ವೀಕರಿಸಿ ಗುರುರಾಯರ ಅನುಗ್ರಹವನ್ನು ಪಡೆದರು.</p><img><p>ಶ್ರೀಮತಿ ಸುಧಾ ಮೂರ್ತಿಯವರು ಪ್ರಹ್ಲಾದ ರಾಜರ ಮುಂಭಾಗದಲ್ಲಿ ಸಂಕಲ್ಪ ಮಾಡಿಕೊಂಡು ಪಾದಪೂಜೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು, “ಲೋಕಕ್ಕೆ ಒಳ್ಳೆಯದಾಗಬೇಕು” ಎಂಬ ಪ್ರಾರ್ಥನೆಯೊಂದಿಗೆ ಸಂಕಲ್ಪವನ್ನು ನೆರವೇರಿಸಿದರು.</p><img><p>ಈ ಸಂದರ್ಭದಲ್ಲಿ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದಿಂದ್ರಾಚಾರ್ಯರು, ಜಿಕೆ ಆಚಾರ್ಯರು ಹಾಗೂ ಶ್ರೀ ನಂದಕಿಶೋರ್ ಆಚಾರ್ಯರು ಉಪಸ್ಥಿತರಿದ್ದರು. ಹಿರಿಯ ವ್ಯವಸ್ಥಾಪಕರು ಸುಧಾ ಮೂರ್ತಿಯವರಿಗೆ ಫಲ ಮಂತ್ರಾಕ್ಷತೆ ನೀಡಿ, “ರಾಘವೇಂದ್ರ ಸ್ವಾಮಿಗಳ ಅನುಗ್ರಹ ಸದಾ ಕಾಲ ಇರಲಿ” ಎಂದು ಆಶೀರ್ವದಿಸಿದರು.</p>
Source link
ರಾಯರ ಸನ್ನಿಧಿಯಲ್ಲಿ ಸುಧಾ ಮೂರ್ತಿ: ಭಕ್ತಿಯಿಂದ ಪಾದಪೂಜೆ ಮತ್ತು ಪ್ರಾರ್ಥನೆ