
ಇತ್ತೀಚೆಗೆ ಸೋಶಿಯಲ್ ಮೀಡಿಯಾದ ಬಳಕೆ ಮಿತಿಮೀರಿ ಹೆಚ್ಚಿದೆ. ಯಾವುದು ಸುಳ್ಳು-ಯಾವುದು ನಿಜ? ಯಾವುದು ಎಐ-ಯಾವುದು ನಿಜವಾಗಲೂ ನಡೆದ ಘಟನೆಯನ್ನು ಪತ್ತೆ ಹಚ್ಚಲು ಅಸಾಧ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಸೆಲೆಬ್ರಿಟಿಗಳ ಹೆಸರನ್ನು ಬಳಸಿ ಅನೇಕರು ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ಇಲ್ಲ, ಸಲ್ಲದ್ದನ್ನು ಹೇಳಿಲ್ಲ. ಈಗ ನಟಿ ಸುಧಾರಾಣಿ (ಸುಧಾರಾಣಿ) ಕೂಡ ಈ ರೀತಿಯ ಫೇಕ್ ನ್ಯೂಸ್ ನ ಸಂತ್ರಸ್ತೆ ಆಗಿದ್ದಾರೆ. ಅವರು ಇದಕ್ಕೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
ಇತ್ತೀಚೆಗೆ ಕೆಲ ಯೂಟ್ಯೂಬರ್ಗಳು ವೀವ್ಸ್ಗಾಗಿ ಹೊಸ ತಂತ್ರವನ್ನು ಕಂಡುಹಿಡಿದಿದ್ದಾರೆ. ಸೆಲೆಬ್ರಿಟಿಗಳು ಹೇಳದೆ ಇರುವ ವಿಷಯವನ್ನು, ‘ಇತ್ತೀಚೆಗೆ ಅವರು ಸಂದರ್ಶನದಲ್ಲಿ ಹೇಳಿದ್ದಾರೆ’ ಎಂದು ಸೇರಿಸುತ್ತಿದ್ದಾರೆ. ಇದರಿಂದ ಯೂಟ್ಯೂಬರ್ಗಳಿಗೆ ವೀವ್ಸ್ ಆಗುತ್ತಿದೆ ನಿಜ. ಆದರೆ, ಸೆಲೆಬ್ರಿಟಿಗಳ ಹೆಸರು ಹಾಳಾಗುತ್ತಿದೆ. ಸುಧಾರಾಣಿ ಬಗ್ಗೆಯೂ ಇದೇ ರೀತಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.
ಸುದ್ದಿಯಲ್ಲೇನಿತ್ತು?
ಯೂಟ್ಯೂಬ್ ಥಂಬ್ ನೇಲ್ ಮಾದರಿಯ ಪರದೆಯನ್ನು ಸುಧಾರಾಣಿ ಹಂಚಿಕೊಂಡಿದ್ದಾರೆ. ‘ಶಿವಣ್ಣನನ್ನು ಮದುವೆಯಾಗಬೇಕೆಂದು ಆಸೆಪಟ್ಟಿದ್ದರು ಸುಧಾರಾಣಿ. ಆನಂದ್ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ನಟಿ ಸುಧಾರಾಣಿ ಅವರಿಗೆ ಶಿವರಾಜ್ ಕುವಾರ್ ಕಂಡರೆ ಭಯವಿತ್ತು. ನಂತರ ಅವರ ಮೇಲೆ ಪ್ರೀತಿ ಹುಟ್ಟಿತು ಮತ್ತು ಮದುವೆಯಾಗುವ ಆಸೆಯೂ ಇತ್ತು. ಆದರೆ ಡಾ. ರಾಜಕುಮಾರ್ ಅವರ ಮಗ ಎಂಬ ಕಾರಣದಿಂದ ಅವರು ಇದನ್ನು ಯಾರಿಗೂ ಹೇಳದೆ ಸುಮ್ಮನಾಗಿದ್ದರು. ಈ ವಿಷಯವನ್ನು ಅವರು ಇತ್ತೀಚಿನ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ’ ಎಂದು ಬರೆಯಲಾಗಿದೆ.
ಇದನ್ನೂ ಓದಿ: ವಿನಯ್ ರಾಜ್ ಕುಮಾರ್, ಮೇಘನಾ ಶೆಟ್ಟಿ ಜೊತೆಗೆ ಸುಧಾರಾಣಿ ನೃತ್ಯ: ವಿಡಿಯೋ
ಉತ್ತರ ಕೊಟ್ಟ ನಟಿ
ಸುಧಾರಾಣಿ ಅವರು ಇದಕ್ಕೆ ಉತ್ತರ ಕೊಟ್ಟಿದ್ದಾರೆ. ತಾವು ಮನೆಯಲ್ಲಿ ಸಾಕಿದ ಶ್ವಾನಗಳು ಈ ವಿಷಯಕ್ಕೆ ಸ್ಪಷ್ಟನೆ ಕೊಡುವ ರೀತಿಯಲ್ಲಿ ಅವರು ವಿಡಿಯೋ ಮಾಡಿದ್ದಾರೆ. ಇದು ಫೇಕ್ ನ್ಯೂಸ್ ಜೊತೆಗೆ, ಈ ರೀತಿಯ ವಿಡಿಯೋ ಮಾಡಿದರೆ ಕೇಸ್ ದಾಖಲಿಸುವ ಎಚ್ಚರಿಕೆಯನ್ನೂ ನೀಡುತ್ತದೆ. ಕಂಡ ಕಂಡವರೆಲ್ಲ ವಿಡಿಯೋ ಮಾಡೋಕೆ ಶುರು ಮಾಡಿದರೆ ಈ ರೀತಿ ಆಗುತ್ತದೆ ಎಂದು ಕೂಡ ಸುಧಾರಾಣಿ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.