ಬಾಗಲಕೋಟೆ, ನವೆಂಬರ್ 12: ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ಮುಂದುವರಿದಿದ್ದು, ವಿಜಯಪುರ-ಬೆಳಗಾವಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಕ್ವಿಂಟಲ್ ಕಬ್ಬಿಗೆ 3,500 ರೂ. ಬೆಲೆ ನಿಗದಿ ಮಾಡಲೇಬೇಕಂದು ರೈತರು ಪಟ್ಟು ಹಿಡಿದಿದ್ದಾರೆ. ಮುಧೋಳದಿಂದ ಸಂಜೆಯ ರಾತ್ರಿ 11ರವರೆಗೆ ನಡೆದ ಸಭೆಯು ವಿಫಲವಾಗಿದೆ. ರಾಜ್ಯ ಹೆದ್ದಾರಿ ಗ್ರಾಮೀಣ ಭಾಗದ ರಸ್ತೆ ಬಂದ್ ಮಾಡುತ್ತಿರುವ, ಮುಧೋಳ ಜಮಖಂಡಿ ಮಾರ್ಗ ಮಧ್ಯೆ ಇರುವ ಶಿರೋಳ ರಸ್ತೆಯನ್ನೂ ಬಂದ್ ಮಾಡಲಾಗಿದೆ. ಶಿರೋಳ. ಬುದ್ನಿ ಪಿಎಂ ರಸ್ತೆ ಕೂಡ ಬಂದ್ ಮಾಡಿದ್ದಾರೆ. ರಸ್ತೆಯಲ್ಲಿ ಮೇವಿಗೆ ಬೆಂಕಿ ಹಚ್ಚಿ ಪ್ರತಿಭಟನೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ