ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಎಲ್ಲಿಗೆ ಹೋದ್ರೂ ತಪ್ಪುತ್ತಿಲ್ಲ ಸಂಕಷ್ಟ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಎಲ್ಲಿಗೆ ಹೋದ್ರೂ ತಪ್ಪುತ್ತಿಲ್ಲ ಸಂಕಷ್ಟ


ನವದೆಹಲಿ, (ಡಿಸೆಂಬರ್ 11): ತಮ್ಮ ಮೇಲಿನ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (ಪ್ರಜ್ವಲ್ ರೇವಣ್ಣ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (ಸುಪ್ರೀಂ ಕೋರ್ಟ್) ತಿರಸ್ಕರಿಸಿದೆ. ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯದಿಂದ ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಮೆಟ್ಟಿಲೇರಿದ್ದು, ಇಂದು (ಡಿಸೆಂಬರ್ 11) ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಬೇರೋದು ಕೋರ್ಟ್‌ಗೆ ವರ್ಗಾವಣೆ ಮಾಡಲು ನಿರಾಕರಿಸಲಾಗಿದೆ.

ಪ್ರಸ್ತುತ ಕೇಸ್ ನಲ್ಲಿ ಹಾಜರುಪಡಿಸುವ ಸಾಕ್ಷ್ಯಗಳ ಆಧಾರದ ಮೇಲೆ ಜಡ್ಜ್ ತೀರ್ಪು ನೀಡಬೇಕೇ ವಿನಃ ಹಿಂದಿನ ಕೇಸ್ ತೀರ್ಪು ಆಧಾರದ ಮೇಲೆ ಅಲ್ಲ. ನಾವು ಜಿಲ್ಲಾ ನ್ಯಾಯಾಂಗದ ನೈತಿಕತೆಯನ್ನು ಸಹ ನೋಡಬೇಕು. ಈ ವ್ಯಕ್ತಿಗೆ ಹೋಗಿ ಜಿಲ್ಲಾ ನ್ಯಾಯಾಲಯದ ವಿರುದ್ಧ ಆದೇಶ ಪಡೆದಿದ್ದಾರೆ ಎಂಬ ಸಂದೇಶ ನೀಡಲು ಸಾಧ್ಯವಿಲ್ಲ. ಜಿಲ್ಲಾ ನ್ಯಾಯಾಂಗದ ನೈತಿಕತೆಯನ್ನು ನಾವು ಉನ್ನತ ಮಟ್ಟದಲ್ಲಿ ಇಡಬೇಕು ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್; ಜೀವಿತಾವಧಿ ಸೆರೆವಾಸ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಹಿಂದಿನ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ ಎಂಬ ಅಂಶದಿಂದ ನ್ಯಾಯಾಧೀಶರು ಅರ್ಜಿದಾರರಾಗಬಾರದು. ಪ್ರಸ್ತುತ ವಿಚಾರಣೆಯಲ್ಲಿ ಒದಗಿಸಲಾದ ಸಾಕ್ಷ್ಯಗಳ ಆಧಾರದ ಮೇಲೆ ವಿಚಾರಣೆಯನ್ನು ಮುಕ್ತಾಯಗೊಳಿಸಬೇಕು. ಹಿಂದಿನ ನಿರ್ಣಯದ ಆಧಾರದ ಮೇಲೆ ಮತ್ತು ಮೇಲ್ಮನವಿ ಹೈಕೋರ್ಟ್ನಲ್ಲಿ ಬಾಕಿ ಇರುವಾಗ ಅಪರಾಧ ನಿರ್ಣಯಕ್ಕೆ ಕಾರಣವಾದ ವಿಚಾರಣೆಯ ಆಧಾರದ ಮೇಲೆ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳಬಾರದು. ಪ್ರಕರಣದಲ್ಲಿ ನಮಗೆ ಯಾವುದೇ ಸಂದೇಹವಿಲ್ಲ ಎಂದು ಸಿಜೆಐ ಸೂರ್ಯಕಾಂತ್ ಆದೇಶದಲ್ಲಿ.

ವಿಚಾರಣಾ ನ್ಯಾಯಾಧೀಶರು ಈ ಹಿಂದೆ ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ಅವರು ಅಪರಾಧಿ ಎಂದು ಆರೋಪಿಸಿದರು, ಮುಂದಿನ ಪ್ರಕರಣದಲ್ಲೂ ತಮ್ಮ ವಿರುದ್ಧ ಪಕ್ಷಪಾತ ತೋರುವ ಸಾಧ್ಯತೆಯಿದೆ ಎಂದು ಪ್ರಜ್ವಲ್ ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ತಮ್ಮ ವಿರುದ್ಧ ಬಾಕಿ ಇರುವ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿಂದ ಬೇರೆ ಕೋರ್ಟ್ ಗೆ ವರ್ಗಾಯಿಸಿ ಕೋರಿ ಸೆಪ್ಟೆಂಬರ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಪ್ರಜ್ವಲ್ ಅವರು ಮೊರೆ ಹೋಗಿದ್ದು, ಅಲ್ಲಿಯೂ ಸಹ ಹಿನ್ನಡೆಯಾಗಿದೆ.

ತಮ್ಮ ಮನೆಕೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂದು ಘೋಷಿಸಿದ್ದಾರೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಕಳೆದ ಆಗಸ್ಟ್‌ನಲ್ಲಿ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 9:48 pm, ಗುರು, 11 ಡಿಸೆಂಬರ್ 25



Source link

Leave a Reply

Your email address will not be published. Required fields are marked *