T20 World Cup 2026: ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ನಡುವಣ ಸೂಪರ್-8 ಸುತ್ತಿನ ಪಂದ್ಯವು ನಾಳೆ (ಫೆ.22) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಸಾಧ್ಯತೆ ಇದೆ. ಅಹಮದಾಬಾದ್ನಲ್ಲಿ ನಡೆದ ಅಭ್ಯಾಸ ಪಂದ್ಯದ ವೇಳೆ ಸಿರಾಜ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಅವರು ಅರ್ಧದಲ್ಲೇ ಅಭ್ಯಾಸ ನಿಲ್ಲಿಸಿದ್ದರು.
ನೆಟ್ಸ್ನಲ್ಲಿ ಸಿರಾಜ್ ಟೀಮ್ ಇಂಡಿಯಾ ಬ್ಯಾಟರ್ ಹಾರ್ದಿಕ್ ಪಾಂಡ್ಯಗೆ ಬೌಲಿಂಗ್ ಮಾಡುತ್ತಿದ್ದರು. ವೇಳೆ ಪಾಂಡ್ಯ ಹೊಡೆದ ಚೆಂಡು ನೇರವಾಗಿ ಸಿರಾಜ್ ಅವರ ಎಡಗಾಲಿನ ಮಂಡಿಗೆ ಬಡಿದಿದೆ.
ಚೆಂಡು ತಗುಲಿದ ತಕ್ಷಣ ಮೊಹಮ್ಮದ್ ಸಿರಾಜ್ ನೋವಿನಿಂದ ಮೈದಾನದಲ್ಲೇ ಕುಸಿದು ಬಿದ್ದರು. ತಕ್ಷಣವೇ ಫಿಸಿಯೋಗಳು ಅವರಿಗೆ ಐಸ್ ಪ್ಯಾಕ್ ಚಿಕಿತ್ಸೆ. ಇದಾಗ್ಯೂ ಅವರು ಚೇತರಿಸಿಕೊಂಡಿರಲಿಲ್ಲ. ಜೊತೆಗೆ ನೋವಿನೊಂದಿಗೆ ಕಾಲು ಎಳೆಯುತ್ತಾ ಮೈದಾನದಿಂದ ಹೊರನಡೆದಿದ್ದಾರೆ.
ಸದ್ಯ ಮೊಹಮ್ಮದ್ ಸಿರಾಜ್ ಅವರ ಗಾಯದ ತೀವ್ರತೆಯ ಬಗ್ಗೆ ವೈದ್ಯಕೀಯ ತಂಡ ನಿಗಾ ಇರಿಸಿದ್ದು, ಫೆಬ್ರವರಿ 22 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮಹತ್ವದ ಪಂದ್ಯಕ್ಕೆ ಅವರು ಲಭ್ಯವಾಗಲಿದ್ದಾರೆ ಎಂಬುದು ಇನ್ನು 24 ಗಂಟೆಗಳಲ್ಲಿ ನಿರ್ಧಾರವಾಗಲಿದೆ.
ಅಂದಹಾಗೆ ಮೊಹಮ್ಮದ್ ಸಿರಾಜ್ ಈ ಬಾರಿಯ ಟಿ20 ನಿಂದ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದರು. ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಹರ್ಷಿತ್ ರಾಣಾ ಪರಿಣಾಮ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಂಡರು.
ಅದರಂತೆ ಯುಎಸ್ಎ ವಿರುದ್ಧ ಮೊದಲ ಪ್ರದರ್ಶನ ಕಣಕ್ಕಿಳಿದಿದ್ದ ಸಿರಾಜ್ 3 ಕಬಳಿಸಿ ಮಿಂಚಿದ್ದರು. ಇದೀಗ ಅವರು ಬಳಲುತ್ತಿರುವ ಕಾರಣ ಬದಲಿ ಆಟಗಾರನನ್ನು ಆಯ್ಕೆ ಮಾಡಲಿದ್ದಾರಾ ಎಂದು ನೋಡಬೇಕಾಗಿದೆ.
ಇದನ್ನೂ ಓದಿ: ಸೂಪರ್-8 ಪಂದ್ಯಗಳ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ?
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ಸಿಂಗ್ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್.
ರಂದು ಪ್ರಕಟಿಸಲಾಗಿದೆ – 1:59 pm, ಶನಿ, 21 ಫೆಬ್ರವರಿ 26