
<p>ಅಹಮದಾಬಾದ್: ಭಾರತ-ನ್ಯೂಜಿಲೆಂಡ್ ನಡುವಿನ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯವು ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಈ ಫೈನಲ್ಗೂ ಮುನ್ನ ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್, ಭಾರತಕ್ಕೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಏನದು?</p><p> </p><img><p>ಜಗತ್ತಿನ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿಂದು ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ನಡೆಯುತ್ತಿದ್ದು, ಪ್ರಶಸ್ತಿಗಾಗಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಡಲು ರೆಡಿಯಾಗಿವೆ.</p><img><p>ಸುಮಾರು ಒಂದು ಲಕ್ಷದ ಮೂವತ್ತೈದು ಸಾವಿರಕ್ಕೂ ಅಧಿಕ ಆಸನದ ವ್ಯವಸ್ಥೆ ಹೊಂದಿರುವ ಈ ಸ್ಟೇಡಿಯಂನಲ್ಲಿಂದು ಪಂದ್ಯದ ಎಲ್ಲಾ ಟಿಕೆಟ್ಗಳು ಸೋಲ್ಡೌಟ್ ಆಗಿವೆ. ಸ್ಟೇಡಿಯಂನ 99% ಪ್ರತಿಶತ ಅಭಿಮಾನಿಗಳು ಭಾರತ ತಂಡವನ್ನು ಬೆಂಬಲಿಸಲು ರೆಡಿಯಾಗಿದ್ದಾರೆ. ಹೀಗಿರುವಾಗಲೇ ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್, ಭಾರತಕ್ಕೆ ಹಾಗೂ ಟೀಂ ಇಂಡಿಯಾ ಅಭಿಮಾನಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ</p><img><p>ಹೌದು, ಅಹಮದಾಬಾದ್ನಲ್ಲೇ ನಡೆದಿದ್ದ 2023ರ ಏಕದಿನ ವಿಶ್ವಕಪ್ ಫೈನಲ್ಗೂ ಮುನ್ನ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಮಾತನಾಡಿ, ಕ್ರೀಡಾಂಗಣದಲ್ಲಿ ನೆರೆದಿದ್ದ ಪ್ರೇಕ್ಷಕರ ಸದ್ದಡಗಿಸುವುದಾಗಿ ಹೇಳಿದ್ದರು. ಹೇಳಿದಂತೆಯೇ ಆಸೀಸ್ ಚಾಂಪಿಯನ್ ಆಗಿತ್ತು. ಭಾರತೀಯ ಅಭಿಮಾನಿಗಳು ಸೈಲೆಂಟ್ ಆಗಿದ್ದರು.</p><img><p>ಈ ಬಾರಿ ಅದೇ ಕ್ರೀಡಾಂಗಣದಲ್ಲಿ ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್ ಕೂಡಾ ಪ್ಯಾಟ್ ಕಮಿನ್ಸ್ ರೀತಿ ಹೇಳಿಕೆ ನೀಡಿದ್ದಾರೆ. ‘ಭಾರತ ತಂಡಕ್ಕೆ ತವರಿನಲ್ಲೇ ಕಪ್ ಗೆಲ್ಲುವ ಒತ್ತಡದಲ್ಲಿ ಆಡಲಿದೆ. ಪ್ರೇಕ್ಷಕರನ್ನು ಸದ್ದಡಗಿಸುವುದು ನಮ್ಮ ಗುರಿ’ ಎಂದು ಅವರು ಹೇಳಿದ್ದಾರೆ.</p><img><p>ಅಂದಹಾಗೆ ಹಾಲಿ ಚಾಂಪಿಯನ್ ಟೀಂ ಇಂಡಿಯಾ, ಸೆಮಿಫೈನಲ್ನಲ್ಲಿ ಬಲಿಷ್ಠ ಇಂಗ್ಲೆಂಡ್ ಎದುರು ರೋಚಕ ಜಯ ಸಾಧಿಸುವ ಮೂಲಕ ಫೈನಲ್ಗೆ ಲಗ್ಗೆಯಿಟ್ಟಿದ್ದು, ತವರಿನಲ್ಲಿ ನಡೆಯುತ್ತಿರುವ ಈ ವಿಶ್ವಕಪ್ ಗೆದ್ದು ಹೊಸ ಮೈಲಿಗಲ್ಲು ಬರೆಯಲು ರೆಡಿಯಾಗಿದೆ.</p><img><p>ಟಿ20 ವಿಶ್ವಕಪ್ ಇತಿಹಾಸದಲ್ಲಿ ಆತಿಥ್ಯ ವಹಿಸಿದ ಯಾವ ದೇಶವೂ ಟ್ರೋಫಿ ಜಯಿಸಿಲ್ಲ. ಭಾರತ ಇದೀಗ ಪ್ರಶಸ್ತಿ ಹೊಸ್ತಿಲಲ್ಲಿದ್ದು, ಈ ಸುವರ್ಣಾವಕಾಶ ಬಳಸಿಕೊಳ್ಳುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.</p>
Source link
‘ಪ್ರೇಕ್ಷಕರ ಸದ್ದಗಿಸುತ್ತೇವೆ’: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತಕ್ಕೆ ಖಡಕ್ ವಾರ್ನಿಂಗ್ ಕೊಟ್ಟ ಕಿವೀಸ್ ಕ್ಯಾಪ್ಟನ್!