ತಮಿಳುನಾಡು ಚಿತ್ರರಂಗಕ್ಕೆ ಈ ಸಂಕ್ರಾಂತಿ ಅಥವಾ ಪೊಂಗಲ್ ವಿವಾದಾತ್ಮಕವಾಗಿ ಪರಿಣಮಿಸಿದೆ. ಜನವರಿ 09 ರಂದು ಬಿಡುಗಡೆ ಆಗಬೇಕಿದ್ದ ದಳಪತಿ ವಿಜಯ್ ನಟನೆಯ ‘ಜನ ನಾಯಕನ್’ (ಜನ ನಾಯಕ್) ಸಿನಿಮಾ ಬಿಡುಗಡೆ ಆಗಲಿಲ್ಲ. ಸಿನಿಮಾ ವಿವಾದದಲ್ಲಿ ಸಿಲುಕಿಕೊಂಡಿದ್ದು ಪ್ರಕರಣ ನ್ಯಾಯಾಲಯದಲ್ಲಿದೆ. ‘ಜನ ನಾಯಕನ್’ ಎದುರು ಬಿಡುಗಡೆ ಆದ ‘ಪರಾಶಕ್ತಿ’ಗೂ ಸಹ ಸೆನ್ಸಾರ್ ಸಮಸ್ಯೆ ಎದುರಾಗಿತ್ತು, ಬರೋಬ್ಬರಿ 23 ಸಿನಿಮಾಗಳಿಗೆ ಸೂಚಿಸಲಾಗಿದೆ. ಆದರೆ ಕೊನೆಗೂ ಸಿನಿಮಾ ಬಿಡುಗಡೆ ಆಗಿದ್ದು, ಬಿಡುಗಡೆ ಆದ ಬಳಿಕ ಸಿನಿಮಾಕ್ಕೆ ಒಂದಾದ ಮೇಲೊಂದರಂತೆ ಸಮಸ್ಯೆ ಎದುರಾಗುತ್ತಲೇ ಇದೆ.
‘ಜನ ನಾಯಕನ್’ ರೀತಿ ‘ಪರಾಶಕ್ತಿ’ ಸಹ ರಾಜಕೀಯ ವಿಷಯ ಒಳಗೊಂಡ ಸಿನಿಮಾ ಆಗಿದೆ. ಹಿಂದಿ ಹೇರಿಕೆಯ ವಿರುದ್ಧ ತಮಿಳರು ಮಾಡಿದ ಹೋರಾಟದ ಕಥೆ ‘ಪರಾಶಕ್ತಿ’ ಸಿನಿಮಾ ಒಳಗೊಂಡಿದೆ. ಜೊತೆಗೆ, ಸಿನಿಮಾದ ನಿರ್ಮಾಪಕರು ಸಹ ತಮಿಳುನಾಡಿನ ಆಡಳಿತ ಪಕ್ಷವಾದ ಡಿಎಂಕೆಯ ಆಪ್ತರಾಗಿದ್ದರೆ, ಸಿನಿಮಾದಲ್ಲಿ ಡಿಎಂಕೆ ಪರವಾದ ಹಲವು ಅಂಶಗಳನ್ನು ಸೇರಿಸಲಾಗಿದೆ ಎಂಬ ಟೀಕೆಯನ್ನು ಸೇರಿಸಲಾಗಿದೆ. ಇವುಗಳ ಜೊತೆಗೆ ಇದೀಗ ತಮಿಳುನಾಡು ಕಾಂಗ್ರೆಸ್, ‘ಪರಾಶಕ್ತಿ’ ಸಿನಿಮಾದ ವಿರುದ್ಧ ದನಿ ಎತ್ತಿದ್ದು ಸಿನಿಮಾವನ್ನು ಬ್ಯಾನ್ ಮಾಡುವಂತೆ ಒತ್ತಾಯಿಸಿದೆ.
ತಮಿಳುನಾಡು ಯುವ ಕಾಂಗ್ರೆಸ್ ‘ಪರಾಶಕ್ತಿ’ ಸಿನಿಮಾದ ವಿರುದ್ಧ ದನಿ ಎತ್ತಿದ್ದು, ಈ ಸಿನಿಮಾ ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದೆ. ಸಿನಿಮಾದಲ್ಲಿ ತೋರಿಸುವಂತೆ 1965 ರಲ್ಲಿ ಕಾಂಗ್ರೆಸ್ ಸರ್ಕಾರವು, ಪೋಸ್ಟ್ ಆಫೀಸ್ ಹುದ್ದೆಗೆ ಹಿಂದಿಯಲ್ಲಿ ಅಪ್ಲಿಕೇಶನ್ ಅನ್ನು ತುಂಬುವಂತೆ ಸೂಚಿಸಲಾಯಿತು. ಜೊತೆಗೆ ಸಿನಿಮಾದ ನಾಯಕ ಶಿವಕಾರ್ತಿಕೇಯನ್ ನಿರ್ವಹಿಸಿರುವ ಪಾತ್ರ, 1965 ಫೆಬ್ರವರಿ 12 ರಂದು ಕೊಯಮತ್ತೂರಿನಲ್ಲಿ ಇಂದಿರಾ ಗಾಂಧಿಯನ್ನು ಭೇಟಿ ಮಾಡುವ ದೃಶ್ಯವಿದೆ. ಅಸಲಿಗೆ ಆ ಸಮಯದಲ್ಲಿ ಅವರು ಕೊಯಮತ್ತೂರಿಗೆ ಬಂದಿರಲೇ ಇಲ್ಲ. ಜೊತೆಗೆ, ಸಿನಿಮಾದ ಕೆಲವು ದೃಶ್ಯಗಳಲ್ಲಿ ಇಂದಿರಾ ಗಾಂಧಿಯನ್ನು ಟೀಕಿಸುವ ದೃಶ್ಯವಿದೆ. ಇಂದಿರಾ ಗಾಂಧಿ, ಕೆ ಕಾಮರಾಜ್, ಲಾಲ್ ಬಹದ್ಧೂರ್ ಶಾಸ್ತ್ರಿ ಅವರ ನಿಜ ಚಿತ್ರಗಳನ್ನು ಬಳಸಲಾಗಿದೆ ಹಾಗೂ ಪೊಲ್ಲಚ್ಚಿಯಲ್ಲಿ 200ಕ್ಕೂ ಹೆಚ್ಚು ಜನರನ್ನು ಕೊಲ್ಲಲಾಗಿದೆ ಎಂದು ಕ್ಲೈಮ್ಯಾಕ್ಸ್ನಲ್ಲಿ ತೋರಿಸಲಾಗಿದೆ. ಇದಕ್ಕೆ ಯಾವುದೇ ಸಾಕ್ಷ್ಯ ಸಹ ಇಲ್ಲ’ ತಮಿಳುನಾಡು ಯುವ ಕಾಂಗ್ರೆಸ್ ಉಪಾಧ್ಯಕ್ಷ ಭಾಸ್ಕರನ್.
ಇದನ್ನೂ ಓದಿ:’ಜನ ನಾಯಕನ ಸಂಕಷ್ಟ’ ಪ್ರಕರಣ ಕೋರ್ಟ್ನಲ್ಲಿರುವ ವಿಜಯ್ಗೆ ಎದುರಾಗಿದೆ
ಈ ಸಿನಿಮಾ ಇತಿಹಾಸವನ್ನು ತಿರುಚುವ, ತಪ್ಪು ಮಾಹಿತಿಯನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡು, ಈ ಕೂಡಲೇ ಈ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದರ ಜೊತೆಗೆ ‘ಪರಾಶಕ್ತಿ’ ಸಿನಿಮಾಕ್ಕೆ ನೆಗೆಟಿವ್ ಪ್ರಚಾರ ಮಾಡಲಾಗುತ್ತಿದೆ ಎಂದು ಸಹ ಸಿನಿಮಾದ ಕ್ರಿಯೇಟಿವ್ ನಿರ್ದೇಶಕ ದೇವ್ ರಾಮಂತ್ ಆರೋಪ ಮಾಡಿದ್ದು, ದಳಪತಿ ವಿಜಯ್ ಅಭಿಮಾನಿಗಳು ಉದ್ದೇಶಪೂರ್ವಕವಾಗಿ ‘ಪರಾಶಕ್ತಿ’ ಸಿನಿಮಾದ ವಿರುದ್ಧ ನೆಗೆಟಿವ್ ಸುದ್ದಿ ಹಬ್ಬುತ್ತಿದೆ ಎಂದು ಆರೋಪಿಸಿದ್ದಾರೆ. ‘ಪರಾಶಕ್ತಿ’ ಸಿನಿಮಾವನ್ನು ಸುಧಾ ಕೊಂಗರ ನಿರ್ದೇಶನ ಮಾಡಿದ್ದು, ಸಿನಿಮಾದಲ್ಲಿ ಶಿವಕಾರ್ತಿಕೇಯನ್ ಜೊತೆಗೆ ಕನ್ನಡದ ನಟಿ ಶ್ರೀಲೀಲಾ ಸಹ ನಟಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ