ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್‌ ತಪಾಸಣೆಯಲ್ಲಿ ಸಿಕ್ಕಿಬಿದ್ದ ಡ್ರೈವರ್ ಲಾರಿಯಲ್ಲೇ ನೇಣಿಗೆ ಶರಣು!

ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್‌ ತಪಾಸಣೆಯಲ್ಲಿ ಸಿಕ್ಕಿಬಿದ್ದ ಡ್ರೈವರ್ ಲಾರಿಯಲ್ಲೇ ನೇಣಿಗೆ ಶರಣು!


ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್ ತಪಾಸಣೆಯಲ್ಲಿ ಸಿಕ್ಕಿಬಿದ್ದ ಡ್ರೈವರ್ ಲಾರಿಯಲ್ಲೇ ನೇಣಿಗೆ ಶರಣು!

ಬೆಂಗಳೂರು, (ಏಪ್ರಿಲ್ 05): ಚಾಲಕನೋರ್ವ ಲಾರಿಯೊಳಗೆ (ಲಾರಿ ಚಾಲಕ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (ಬೆಂಗಳೂರು) ಜೆ.ಪಿ.ನಗರದಲ್ಲಿ ನಡೆದಿದೆ. ಷಣ್ಮುಗ ಮೃತ ಲಾರಿ ಚಾಲಕ. ಔಷಧ ಡ್ರಿಂಗ್ ಆಯಂಡ್ ಡ್ರೈವ (ಕುಡಿದು ಚಾಲನೆ ಮಾಡಿ)ತಪಾಸಣೆ ವೇಳೆ ಷಣ್ಮುಗ ಮದ್ಯಪಾನ ಮಾಡಿರುವುದು ಇದೆ. ಹೀಗಾಗಿ, ಚಾಲಕ ಷಣ್ಮುಗಗೆ ದಂಡ ವಿಧಿಸಿ ಬಳಿಕ ಜೆ.ಪಿ.ನಗರ ಠಾಣೆಗೆ ಎಳೆದೊಯ್ದಿದ್ದಾರೆ. ಆದರೆ, ಷಣ್ಮುಗ ಠಾಣೆಯ ಬಳಿ ನಿಲ್ಲಿಸಿದ್ದ ಲಾರಿಯಲ್ಲೇ ನೇಣು ಬಿಗಿದುಕೊಂಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆಯಿಂದ ಮನನೊಂದು ಚಾಲಕ, ತಡರಾತ್ರಿ ಈ ದುರಂತ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ನಿನ್ನೆ (ಏಪ್ರಿಲ್ 04) ರಾತ್ರಿ ಜೆಪಿ ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ತಪಾಸಣೆ (ಪಾನೀಯ ಮತ್ತು ಚಾಲನೆ ತಪಾಸಣೆ) ನಡೆಸುತ್ತಿದ್ದರು. ಈ ವೇಳೆ ಲಾರಿ ಚಾಲಕ ಷಣ್ಮುಗ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಪೊಲೀಸರಿಗೆ ಅನುಮಾನ ಬಂದಿದೆ. ಕೂಡಲೇ ಆತನನ್ನು ತಡೆದ ಪೊಲೀಸರು ಬ್ರೀತ್ ಅನಲೈಸರ್ ಮೂಲಕ ತಪಾಸಣೆ ನಡೆಸಿದಾಗ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ. ಇದಾದ ನಂತರ ಪೊಲೀಸರು ಷಣ್ಮುಗನಿಗೆ ಭಾರೀ ಮೊತ್ತದ ದಂಡ (ಫೈನ್) ವಿಧಿಸಿದ್ದಾರೆ. ಜೊತೆಗೆ, ಮದ್ಯದ ಅಮಲಿನಲ್ಲಿದ್ದ ಚಾಲಕನಿಗೆ ವಾಹನ ಚಲಾಯಿಸಲು ಬಿಡದ ಪೊಲೀಸರು, ಲಾರಿಯನ್ನು ವಶಕ್ಕೆ ಪಡೆದು ಜೆಪಿ ನಗರ ಪೊಲೀಸ್ ಠಾಣೆಗೆ ಎಳೆದೊಯ್ದಿದ್ದರು. ಆದರೆ, ಚಾಲಕ ಷಣ್ಮುಗ ಅದೇ ಲಾರಿಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಇದನ್ನೂ ಓದಿ: ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಪತ್ತೆ!

ಮದ್ಯಪಾನದ ಅಮಲು ಹಾಗೂ ಪೊಲೀಸರು ದಂಡ ಹಾಕಿದ ಕಾರಣ ಮನನೊಂದು ತಡರಾತ್ರಿ ಲಾರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು (ಏಪ್ರಿಲ್ 05) ಬೆಳಿಗ್ಗೆ ಲಾರಿಯೊಳಗೆ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಇರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕೇಸ್ ದಾಖಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *