ಭಯೋತ್ಪಾದಕರ ನಂಟು ಆರೋಪ: ಬಳ್ಳಾರಿಯ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಭಯೋತ್ಪಾದಕರ ನಂಟು ಆರೋಪ: ಬಳ್ಳಾರಿಯ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ


ಭಯೋತ್ಪಾದಕರ ನಂಟು ಆರೋಪ: ಬಳ್ಳಾರಿಯ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಬಳ್ಳಾರಿ, ಮಾರ್ಚ್ 26: ಮೂಲಭೂತವಾದದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಹಾಗೂ ಭಯೋತ್ಪಾದಕರ ನಂಟು ಶಂಕೆ ಹಿನ್ನೆಲೆ ಬಳ್ಳಾರಿ ಮೂಲದ ಯುವಕ ಸೇರಿದಂತೆ ದೇಶದ ವಿವಿಧ ರಾಜ್ಯದ 12 ಮಂದಿ ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರನ್ನು ಬಂಧಿಸಿದ್ದಾರೆ. ಬಳ್ಳಾರಿ ನಗರದ ಅಬ್ದುಲ್ ಸಲಾಮ್ (36) ರಾಜ್ಯದಲ್ಲಿ ಬಂಧನ ಆಗಿರುವ ಆರೋಪಿ. ಕರ್ನಾಟಕ ಸೇರಿದಂತೆ ಆಂಧ್ರ, ಬಿಹಾರ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಸಲಾಮ್ ಕುರಿತ ಖಚಿತ ಮಾಹಿತಿ ಆಧಾರದ ಮೇಲೆ ಬಳ್ಳಾರಿಗೆ ಬಂದಿದ್ದ ಆಂಧ್ರ ಪ್ರದೇಶ ಪೊಲೀಸರು, ಕೌಲ್ ಬಜಾರ್ ಪೊಲೀಸ್ ಠಾಣೆಯ ಸಿಬ್ಬಂದಿ ಸಲಾಮ್ ಅನ್ನು ಬಂಧಿಸಿದ್ದಾರೆ. ಪಂಚನಾಮೆಯ ಬಳಿಕ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಹಿನ್ನೆಲೆ ಆಂಧ್ರ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಉಗ್ರವಾದ ಹರಡುವುದು ಮತ್ತು ಭಯೋತ್ಪಾದನಾ ಸಂಘಟನೆಗಳ ನಂಟು ಹೊಂದಿರುವವರ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು, ಈ ಬಗ್ಗೆ ಮಾರ್ಚ್ 23 ರಂದು ವಿಜಯವಾಡ ಟೌನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು.

ಇದನ್ನೂ ಓದಿ: ಆಂಧ್ರದ ಮಾರ್ಕಪುರಂನಲ್ಲಿ ಹೊತ್ತಿ ಉರಿದ ಬಸ್; 10 ಜನ ಸಜೀವದಹನ

ಸರ್ಚ್ ವಾರೆಂಟ್ ಪಡೆದು ಕಾರ್ಯಾಚರಣೆಗಿಳಿದಿದ್ದ ಖಾಕಿ ಟೀಂ, ವಿಜಯವಾಡದ ವಿಂಚ್‌ಪೇಟ್‌ನಲ್ಲಿ ಪ್ರಮುಖ ಅರೋಪಿ ಮೊಹಮ್ಮದ್ ರೆಹಮತುಲ್ಲಾ ಷರೀಫ್ (23) ಎಂಬಾತನನ್ನು ಬಂಧಿಸಿದ್ದರು. ಈ ವೇಳೆ ಸಾಮಾಜಿಕ ಮಾಧ್ಯಮಗಳ ಮೂಲಕ ಸಿದ್ದಾಂತ ಮತ್ತು ಮೂಲಭೂತವಾದಿ ಐಎಸ್ ಐಎಸ್ ಸಂಘಟನೆಗಳ ವಿಚಾರಧಾರೆ ಪ್ರಚಾರ ನಿರತರ ಕುರಿತು ಆತ ನೀಡಿದ್ದ ಮಾಹಿತಿ ಕಾರ್ಯಾಗಾರ ನಡೆಸಿ 12 ಮಂದಿಯನ್ನು ಬಂಧಿಸಲಾಗಿದೆ.

ತನಿಖೆಯಲ್ಲಿ ತಿಳಿದುಬಂದಂತೆ, ಮಾಲಿಕ್ ಇಸ್ಲಾಮಿಕ್ ಯೂತ್ ಎಂಬ ಗುಂಪನ್ನು ರಚಿಸಿ ಯುವಕರನ್ನ ಜಿಹಾದ್‌ಗೆ ಪ್ರೇರೇಪಿಸುವ ಪ್ರಯತ್ನ. ಸಾಮಾಜಿಕ ಜಾಲತಾಣಗಳ ಮೂಲಕ ಅತಿರೇಕದ ವಿಷಯಗಳನ್ನು ಹಂಚಿಕೊಂಡು ತಮ್ಮ ಜಾಲವನ್ನು ವಿಸ್ತರಿಸಿದ್ದರು. ಈ ಗುಂಪು ಬಿಹಾರ, ದೆಹಲಿ, ಪಶ್ಚಿಮ ಬಂಗಾಳ, ರಾಜಸ್ಥಾನ, ಕರ್ನಾಟಕ ಮತ್ತು ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ, ವಿವಿಧ ವ್ಯಕ್ತಿಗಳೊಂದಿಗೆ ಸಂಪರ್ಕ ಸಾಧಿಸಿ ಕಾರ್ಯಚಟುವಟಿಕೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

 

 

 

 



Source link

Leave a Reply

Your email address will not be published. Required fields are marked *