ಬಂಡೀಪುರ ಸಫಾರಿ ಪಾಯಿಂಟ್ ಸಂಗ್ರಹ ಚಿತ್ರ
ಬೆಂಗಳೂರು, ನವೆಂಬರ್ 7: ಮೈಸೂರು (ಮೈಸೂರು) ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿ (ಹುಲಿ ದಾಳಿ) ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಿರುವ ಬೆನ್ನಲ್ಲೇ, ಹುಲಿ ಸೆರೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ತುರ್ತು ಕ್ರಮಕ್ಕೆ ಮುಂದಾಗಿದೆ. ಹುಲಿ ಸೆರೆ ಹಿಡಿಯಲು ಸದ್ಯ ಅರಣ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಸಿಬ್ಬಂದಿಯನ್ನು ಕೂಂಬಿಂಗ್ಗೆ ಬಳಸಲು ಬಂಡೀಪುರ ಮತ್ತು ನಾಗರಹೊಳೆಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಸಫಾರಿಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಬಂಡಿಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ನಿಷೇಧಿಸಿ ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
ಇದನ್ನೂ ಓದಿ: ವ್ಯಾಘ್ರನ ಅಟ್ಟಹಾಸಕ್ಕೆ ಮೈಸೂರಲ್ಲಿ ಮತ್ತೊಬ್ಬ ರೈತ ಬಲಿ: ದನ ಕಾಯುತ್ತಿದ್ದವನ ಕೊಂದ ಹುಲಿ
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 1:05 pm, ಶುಕ್ರ, 7 ನವೆಂಬರ್ 25