
ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷೆಯು ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಪಾರ್ಕಿಂಗ್ ಶುಲ್ಕವನ್ನು ಹೆಚ್ಚಿಸಲು ಪ್ರಸ್ತಾಪಿಸಿದೆ. ಈ ಕ್ರಮವು ನಗರದಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಿ, ವಾಹನ ಸಂಚಾರದ ವೇಗವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.<img><p>ಬೆಂಗಳೂರಲ್ಲಿ ಹೆಚ್ಚು ಪಾರ್ಕಿಂಗ್ ಶುಲ್ಕ ವಿಧಿಸಲು ಆರ್ಥಿಕ ಸಮೀಕ್ಷೆ ಪ್ರಸ್ತಾಪ ಮಾಡಿದೆ. ನಗರದಲ್ಲಿ ವಾಹನ ದಟ್ಟಣೆ ನಿವಾರಣೆಗೆ ಈ ಕ್ರಮ ಅನಿವಾರ್ಯ ಎಂದು ಕೇಂದ್ರ ಸರ್ಕಾರ ಹೇಳಿದೆ.</p><img><p>ಸಂಸತ್ತಿನಲ್ಲಿ ಗುರುವಾರ ಮಂಡಿಸಿದ ಆರ್ಥಿಕ ಸಮೀಕ್ಷೆಯು ಬೆಂಗಳೂರಲ್ಲಿ ಹೆಚ್ಚು ಪಾರ್ಕಿಂಗ್ ಶುಲ್ಕ ವಿಧಿಸುವ ಪ್ರಸ್ತಾಪ ಮಾಡಿದೆ.</p><img><p>ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮೀಕ್ಷೆ ಮಂಡಿಸಿ, ‘ದೆಹಲಿ, ಮುಂಬೈ, ಬೆಂಗಳೂರು ಮತ್ತಿತರ ಹೆಚ್ಚು ವಾಹನದಟ್ಟಣೆ ಇರುವ ನಗರಗಳಲ್ಲಿ ಬೇಡಿಕೆ ಆಧಾರಿತ ಪಾರ್ಕಿಂಗ್ ಮ್ಯಾನೇಜ್ಮೆಂಟ್ನಂಥ ಕ್ರಮಗಳನ್ನು ಜಾರಿಗೊಳಿಸುವ ಮೂಲಕ ಟ್ರಾಫಿಕ್ ಸಮಸ್ಯೆ ನಿವಾರಿಸಿ, ವಾಹನ ಸಂಚಾರದ ವೇಗವನ್ನು ಹೆಚ್ಚಿಸುವ ಕುರಿತು ಪ್ರಸ್ತಾಪಿಸಿದರು.</p><img><p>‘ವಿದೇಶಗಳಲ್ಲಿ ಹೆಚ್ಚು ವಾಹನದಟ್ಟಣೆ ಅವಧಿಯಲ್ಲಿ ಹೆಚ್ಚಿನ ಟೋಲ್ ಹಾಗೂ ಹೆಚ್ಚು ಟ್ರಾಫಿಕ್ ಇರುವ ಪ್ರದೇಶಗಳಲ್ಲಿ ವಾಹನಗಳಿಗೆ ಪಾರ್ಕಿಂಗ್ ಪ್ರತ್ಯೇಕ ಶುಲ್ಕ ವಿಧಿಸುತ್ತಿರುವ ಕ್ರಮಗಳಿವೆ. ಭಾರತಲ್ಲೂ ಇದನ್ನು ಜಾರಿಗೆ ತರಬೇಕಿದೆ’ ಎಂದರು. ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಇ-ಬಸ್ಗಳ ಬಳಕೆಗೆ ಉತ್ತೇಜನ ನೀಡಲೂ ಸಮೀಕ್ಷೆ ಸಲಹೆ ನೀಡಿದೆ.</p><img><p>2025-26ರ ಆರ್ಥಿಕ ಸಮೀಕ್ಷೆಯ ಪ್ರಕಾರ, ದಕ್ಷಿಣ ರಾಜ್ಯಗಳಾದ ಕರ್ನಾಟಕ -39, ತೆಲಂಗಾಣ -7 ಮತ್ತು ತಮಿಳುನಾಡು -5 ಭಾರತದಲ್ಲಿನ ಒಟ್ಟು ಸ್ಟಾರ್ಟ್ಅಪ್ಗಳಲ್ಲಿ ಅರ್ಧಕ್ಕಿಂತ ಹೆಚ್ಚು ನೆಲೆಯಾಗಿವೆ.</p>
Source link
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನೀಗಲು ಪಾರ್ಕಿಂಗ್ ಶುಲ್ಕ ಹೆಚ್ಚಳಕ್ಕೆ ಆರ್ಥಿಕ ಸಮೀಕ್ಷೆ ಪ್ರಸ್ತಾಪ!