ಕ್ರೀಡೆ ಯುವಕರ ಜೀವನೋತ್ಸಾಹ ದ್ವಿಗುಣಗೊಳಿಸುವಲ್ಲಿ ಸಹಕಾರಿ.
ಶಿರಾ : ಕ್ರೀಡೆ ಯುವಕರ ಜೀವನೋತ್ಸಾಹ ದ್ವಿ ಗುಣಗೊಳಿಸುವಲ್ಲಿ ಸಹಕಾರಿಯಾಗಲಿದ್ದು, ಇಂತಹ ಕ್ರಿಕೆಟ್ ಟೂರ್ನಿಮೆಂಟ್ ಗಳು ಯುವಕರಲ್ಲಿ ಪರಸ್ಪರ ಸ್ನೇಹ-ಬಾಂಧವ್ಯ ಗಟ್ಟಿಗೊಳಿಸಿ ಒಗ್ಗೂಡಿಸುವಂತಹ ಕೆಲಸದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದುಸಮಾಜಸೇವಕ, ಶಿರಾ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ ಹೇಳಿದರು.ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಜಿ.ರಂಗನಹಳ್ಳಿ ಗ್ರಾಮದಲ್ಲಿ ಶ್ರೀ ಸೇವಾಲಾಲ್ ಕ್ರಿಕೆಟರ್ಸ್ ಹಾಗೂ ಶಿವು ಚಂಗಾವರ ಅಭಿಮಾನಿ ಬಳಗ ಅಯೋಜಿಸಿದ್ದ 2. ದಿನಗಳ ಕ್ರಿಕೆಟ್ ಟೂರ್ನಿಮೆಂಟ್ ಉದ್ಘಾಟಿಸಿ ಮಾತನಾಡಿದರು.ಕ್ರಿಕೆಟ್ ಜೊತೆಗೆ ಗ್ರಾಮೀಣ ಪ್ರದೇಶದ ಕ್ರೀಡೆಗಳಾದ ಕಬ್ಬಡಿ,…