ತುಮಕೂರು, ಡಿಸೆಂಬರ್ 20: ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ದಸರಿಘಟ್ಟದಲ್ಲಿ ಪ್ರವೀಣ್ ಎಂಬುವವರು ತಮ್ಮ ಸಾಕು ನಾಯಿ ‘ಖುಷಿ’ಗೆ ಅದ್ಧೂರಿ ಸೀಮಂತ ಕಾರ್ಯಕ್ರಮವನ್ನು ನಡೆಸುತ್ತಿದ್ದರು. ತನ್ನ ಪ್ರೀತಿಯ ನಾಯಿಯ ಸೀಮಂತಕ್ಕಾಗಿ 20 ಸಾವಿರ ರೂಪಾಯಿ ವೆಚ್ಚದಲ್ಲಿ 50 ಕೆಜಿ ಗೀ ರೈಸ್, 50 ಕೆಜಿ ಚಿಕನ್ ಗ್ರೇವಿ ಮಾಡಿಸಿ 500 ಜನರಿಗೆ ಭೋಜನ ಏರ್ಪಡಿಸಿದ್ದ ಮಾಲೀಕ, ಹೊಸ ಬಟ್ಟೆ, ಹೂವಿನ, ಕೇಕ್ ಕಟಿಂಗ್ ಮೂಲಕ ಸಂಭ್ರಮದ ಸಂಭ್ರಮ ಆಚರಿಸಿದ್ದಾರೆ. ಮಾಲೀಕನ ಈ ವಿಶಿಷ್ಟ ಶ್ವಾನ ಪ್ರೀತಿಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.