Headlines

ತುಮಕೂರಿನ ಕೈಗಾರಿಕೆಗಳಿಗೆ ಮಾಸ್ಟರ್ ಸ್ಟ್ರೋಕ್​: 5 ವರ್ಷದಲ್ಲಿ 11 ಕಾರ್ಖಾನೆಗಳು ಬಂದ್‌!

ತುಮಕೂರಿನ ಕೈಗಾರಿಕೆಗಳಿಗೆ ಮಾಸ್ಟರ್ ಸ್ಟ್ರೋಕ್​: 5 ವರ್ಷದಲ್ಲಿ 11 ಕಾರ್ಖಾನೆಗಳು ಬಂದ್‌!


ತುಮಕೂರು, ಡಿಸೆಂಬರ್ 10: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ (ಮಾಲಿನ್ಯ) ವಿಪರೀತವಾಗುತ್ತಿದೆ. ಗಾಳಿಯಲ್ಲೂ ದಿನೇದಿನೇ ಕುಸಿತ ಉಂಟಾಗುತ್ತಿದೆ. ಇದೆಲ್ಲದರ ಜೊತೆಗೆ ನಗರದಲ್ಲೀಗ ಕಲುಷಿತ ಗಾಳಿಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಆತಂಕ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ಐದು ವರ್ಷಗಳಲ್ಲಿ ವಾಯು ಮಾಲಿನ್ಯಕ್ಕೆ ಕಾರಣವಾದ 11 ಕೈಗಾರಿಕೆಗಳಿಗೆ (ಕೈಗಾರಿಕೆಗಳು) ಅಧಿಕಾರಿಗಳು ಬೀಗ ಹಾಕಿದ್ದು, ನೂರಾರು ಕಾರ್ಖಾನೆಗಳಿಗೆ ನೋಟಿಸ್ ನೀಡಿದ್ದಾರೆ.

11 ಕೈಗಾರಿಕೆಗಳು ಬಂದ್

ಕೈಗಾರಿಕಾ ಹಬ್ ಆಗಿ ಬೆಳೆಯುತ್ತಿರುವ ತುಮಕೂರಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿ ಶಾಕ್ ನೀಡಿದೆ. ಜಿಲ್ಲೆಯ ವಾತಾವರಣ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಆತಂಕಕಾರಿ ಅಂಶ ಹೊರಬಿದ್ದಿದೆ. ಅನಿಯಂತ್ರಿತವಾಗಿ ಹೊರ ಸೂಸುವ ಕೆಟ್ಟ ಹೊಗೆ ಹಾಗೂ ಮಾಲಿನ್ಯ ನಿಯಂತ್ರಣ ನಿಯಮಾವಳಿಗಳ ಆಧಾರದ ಮೇಲೆ ಸುಮಾರು 11 ಕೈಗಾರಿಕೆಗಳಿಗೆ ಬೀಗ ಹಾಕಲಾಗಿದೆ.

ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಬಲ್ಡೋಟಾ ಕಾರ್ಖಾನೆ ವಿವಾದ: ಹೋರಾಟಕ್ಕಿಳಿದ ರೈತರು

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 2020-21ನೇ ಸಾಲಿನಿಂದ 2024-25ರವರೆಗೆ ಈ ಕ್ರಮ ಕೈಗೊಳ್ಳಲು, ಅದರ ಹೊರತಾಗಿ ಸುಮಾರು 640 ಕೈಗಾರಿಕೆಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಜೊತೆಗೆ ಕೆಲ ನಿಯಮ ಉಲ್ಲಂಘನೆ ಬಗ್ಗೆ ಆರೋಪ ಕೇಳಿ ಬಂದ ಬೆನ್ನಲ್ಲೇ ಸುಮಾರು 56 ಕೈಗಾರಿಕೆಗಳನ್ನು ಯಾಕೆ ಮುಚ್ಚುಬಾರದೆಂದು ಅಂತಿಮ ನೋಟಿಸ್ ಕೊಡಲಾಗಿದೆ, ಕೈಗಾರಿಕೆಗಳ ಉತ್ತರಕ್ಕಾಗಿ ಅಧಿಕಾರಿಗಳು ಕಾಯುತಿದ್ದಾರೆ.

ತುಮಕೂರು ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಶಿಕ್ಷಣ, ಕೃಷಿ ಜೊತೆಗೆ ಕೈಗಾರಿಕಾ ವಲಯವೂ ದೊಡ್ಡ ದೊಡ್ಡ ಕಾರ್ಖಾನೆಗಳಿಗೆ ಕೈ ಬಿಸಿ ಕರೆಯುತ್ತಿದೆ. ಅದರಂತೆ ತುಮಕೂರು ನಗರದ ಹೊರವಲಯದ ಕೈಗಾರಿಕಾ ಪ್ರದೇಶಗಳು ನೂರಾರು ಉದ್ದಿಮೆಗಳು, ಕಾರ್ಖಾನೆಗಳು ತಲೆ ಎತ್ತುತ್ತಿವೆ. ಈ ಕಾರ್ಖಾನೆಗಳು ಸೂಸುವ ಹೊಗೆ, ತ್ಯಾಜ್ಯದಿಂದ ಗಾಳಿ ಕಲುಷಿತವಾಗುತ್ತಿದೆ. ವಾಯು ಮಾಲಿನ್ಯ ನಿಯಂತ್ರಣಕ್ಕೆ ಪೂರಕವಾದ ಕಾರ್ಯ ನಡೆಯುತ್ತಿಲ್ಲ. ಮಂಡಳಿಯಿಂದ ನೋಟಿಸ್ ಜಾರಿ ಮಾಡುವುದರಿಂದ ಕೈಗಾರಿಕೆ ವಿರುದ್ಧ ಯಾವುದೇ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿಲ್ಲ.

ಆರೋಗ್ಯ ಸಮಸ್ಯೆ ಆತಂಕ

ಜಿಲ್ಲೆಯಲ್ಲಿ ಪ್ರಮುಖವಾಗಿ ವಸಂತನರಸಾಪುರ, ಅಂತರಸನಹಳ್ಳಿ, ಹಿರೇಹಳ್ಳಿ ಸೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕೈಗಾರಿಕೆಗಳ ಆರಂಭಕ್ಕೆ ಸಾವಿರಾರು ಜಾಗ ಕಾಯ್ದಿರಿಸಲಾಗಿದೆ. ಇಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕೈಗಾರಿಕೆಗಳು ಶುರುವಾಗಿಲ್ಲ. ಆದರೆ ಕಾರ್ಯಾರಂಭ ಮಾಡಿದ ಕೆಲ ಕೈಗಾರಿಕೆ, ಉದ್ದಿಮೆಗಳು ಪರಿಸರ ಸಂರಕ್ಷಣೆಗೆ ಒತ್ತು ನೀಡುತ್ತಿಲ್ಲ ಎಂಬುದು ಮಾಲಿನ್ಯ ನಿಯಂತ್ರಣ ಇಲಾಖೆ ಅಂಕಿ ಅಂಶಗಳೇ ಹೇಳುತ್ತಿವೆ. ಇನ್ನು ಈ ರೀತಿಯ ಕಾರ್ಖಾನೆಗಳು ನಡೆಯುತ್ತಿರುವ ಕೈಗಾರಿಕಾ ಪ್ರದೇಶಗಳು ಸುತ್ತಮುತ್ತಲಿನ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗುವ ಆತಂಕ ಶುರುವಾಗಿದೆ.

ಇದನ್ನೂ ಓದಿ: ವಾರದಲ್ಲಿ 6 ದಿನ ಮೌನ ವ್ರತ: ಭಕ್ತರ ಅಚ್ಚರಿಗೆ ಕಾರಣವಾಯ್ತು ಗವಿಸಿದ್ದೇಶ್ವರ ಸ್ವಾಮೀಜಿ ನಡೆ

ನಗರದ ಹೊರ ಭಾಗದಲ್ಲಿನ ಕೈಗಾರಿಕೆಗಳಿಂದ ವಾಯು ಮಾಲಿನ್ಯ ಹೆಚ್ಚಾದರೆ, ನಗರದ ಒಳಗಡೆ ವಾಹನಗಳ ಅತಿಯಾದ ಚಟುವಟಿಕೆ ಜನರಿಗೆ ಕಿರಿಕಿರಿ ಎನಿಸುತ್ತಿದೆ. ತುಮಕೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯಲ್ಲಿ 5,55,531 ಬೈಕ್‌ಗಳು, 67 ಸಾವಿರ ಕಾರುಗಳು ನೋಂದಣಿಯಾಗಿವೆ. ಗೂಡ್ಸ್ ಲಾರಿ, ಕೆಎಸ್‌ಆರ್‌ಟಿಸಿ, ಖಾಸಗಿ ಮತ್ತು ಶಾಲಾ-ಕಾಲೇಜು ಬಸ್‌ಗಳು ಸೇರಿದಂತೆ ಒಟ್ಟು 1887 ಬಸ್‌ಗಳು ಪ್ರತಿನಿತ್ಯ ಸಿಗುತ್ತಿವೆ. ಇವುಗಳಿಂದ ಬರುವ ಅಪಾಯಕಾರಿ ಹೊಗೆ ಜಿಲ್ಲೆಯ ಜನತೆಯನ್ನು ಹೈರಾಣಾಗಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *