
ಈ ಪ್ರಕರಣದಲ್ಲಿ ಶಿವಾನಂದ, ಗಣೇಶ್ ಮತ್ತು ಪ್ರದೀಪ್ ಎಂಬ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ಪ್ರದೀಪ್ ಎಂಬಾತನೇ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿವಾನಂದ ಮತ್ತು ಗಣೇಶ್ರನ್ನು ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಹಲ್ಲೆ ಮಾಡಿರುವುದೂ ತನಿಖೆಯಲ್ಲಿ ದೃಢಪಟ್ಟಿದೆ.
ಮಹಿಳೆಯ ಹಿನ್ನೆಲೆ
ಪೊಲೀಸರ ಮಾಹಿತಿ ಪ್ರಕಾರ, ಅತ್ಯಾ*ಚಾರಕ್ಕೊಳಗಾದ ಮಹಿಳೆ ಗಂಡನೊಂದಿಗೆ ಉಂಟಾದ ವೈಮನಸ್ಸಿನ ಹಿನ್ನೆಲೆ ಹುಬ್ಬಳ್ಳಿಗೆ ಆಗಮಿಸಿದ್ದಳು. ಸಿದ್ಧಾರೂಢ ಮಠದಲ್ಲಿ ಊಟ ಮಾಡಿಕೊಂಡು, ಭಿಕ್ಷೆ ಬೇಡುತ್ತ ತಿರುಗಾಡುತ್ತಿದ್ದಳು. ಆಕೆಯ ಗಂಡ ಒಂದು ಪ್ರಕರಣದ ಆರೋಪಿಯಾಗಿ ಪ್ರಸ್ತುತ ಶಿವಮೊಗ್ಗ ಜೈಲಿನಲ್ಲಿ ಬಂಧನದಲ್ಲಿದ್ದಾನೆ.
ಒಟ್ಟಿನಲ್ಲಿ, ಮಹಿಳೆಯ ಮೇಲೆ ನಡೆದ ಅಮಾನವೀಯ ಕೃತ್ಯ, ವಿಡಿಯೋ ಚಿತ್ರೀಕರಣ ಹಾಗೂ ವೈರಲ್, ಸ್ಥಳೀಯರ ಹಲ್ಲೆ, ತಾಂಡಾ ಸಮುದಾಯದ ಪ್ರತಿಭಟನೆ ಈ ಎಲ್ಲ ಅಂಶಗಳು ಸೇರಿ ಹುಬ್ಬಳ್ಳಿ ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮ ಹಾಗೂ ನ್ಯಾಯಾಂಗ ಪ್ರಕ್ರಿಯೆಯಿಂದ ಸತ್ಯಾಸತ್ಯತೆ ಹೊರಬರಬೇಕಿದೆ.