Headlines

Video: ಉಡುಪಿ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ

Video: ಉಡುಪಿ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ


ಉಡುಪಿ, ಡಿ.26: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ದೆಯ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿದ್ದಾರೆ. ಮೂವರು ಕಳ್ಳಿಯರ ಕರಾಮತ್ತು ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ. ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಪೂಜೆಯ ವೇಳೆ ಮೂರು ಕಡೆಯಿಂದ ಸುತ್ತುವರಿದ ಕಳ್ಳರು ಗಂಟೆ ಹೊಡೆಯುವ ನೆಪದಲ್ಲಿ ಚಿನ್ನದ ಸರ ಎಗರಿಸಿದ್ದಾರೆ. 2 ಲಕ್ಷ ಮೌಲ್ಯದ ಚಿನ್ನದ ಸರ ಎಂದು ಹೇಳಲಾಗಿದೆ. ಇದೀಗ ಆ ಮೂರು ಕಳ್ಳರ ಪತ್ತೆಗಾಗಿ ಪಡುಬಿದ್ರಿ ಪೊಲೀಸರು ಬಲೆ ಬೀಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *