ಬಂದೂಕು ಹಿಡಿದು ಸೈನಿಕನಾದ ಉಪೇಂದ್ರ: ಹುಟ್ಟುಹಬ್ಬದಂದೇ ಗೆರಿಲ್ಲಾ ವಾರ್‌ಗೆ ಹೊರಟ ಬುದ್ಧಿವಂತ!

ಬಂದೂಕು ಹಿಡಿದು ಸೈನಿಕನಾದ ಉಪೇಂದ್ರ: ಹುಟ್ಟುಹಬ್ಬದಂದೇ ಗೆರಿಲ್ಲಾ ವಾರ್‌ಗೆ ಹೊರಟ ಬುದ್ಧಿವಂತ!



ಬಂದೂಕು ಹಿಡಿದು ಸೈನಿಕನಾದ ಉಪೇಂದ್ರ: ಹುಟ್ಟುಹಬ್ಬದಂದೇ ಗೆರಿಲ್ಲಾ ವಾರ್‌ಗೆ ಹೊರಟ ಬುದ್ಧಿವಂತ!
<p>ಓಂಪ್ರಕಾಶ್‌ ರಾವ್‌ ನಿರ್ದೇಶನದ 50ನೇ ಚಿತ್ರ ಘೋಷಣೆ ಆಗಿದೆ. ಆ ಚಿತ್ರದ ಹೆಸರು ‘ಗೆರಿಲ್ಲಾ ವಾರ್‌’. ಚಿತ್ರದಲ್ಲಿ ಉಪೇಂದ್ರ ಅವರದ್ದು ಸೈನಿಕನ ಪಾತ್ರ. ನಾಯಕಿಯಾಗಿ ನಿಮಿಕಾ ರತ್ನಾಕರ್‌ ಇದ್ದಾರೆ. ನಾದಬ್ರಹ್ಮ ಹಂಸಲೇಖ ಸಂಗೀತ ನೀಡುತ್ತಿದ್ದಾರೆ.</p><img><p>ಉಪೇಂದ್ರ ಇಂದು ಹುಟ್ಟುಹಬ್ಬ ಸಂಭ್ರಮದಲ್ಲಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಇದೇ ಸಂದರ್ಭದಲ್ಲಿ ಉಪೇಂದ್ರ ನಟನೆಯ, ಓಂಪ್ರಕಾಶ್‌ ರಾವ್‌ ನಿರ್ದೇಶನದ 50ನೇ ಚಿತ್ರ ಘೋಷಣೆ ಆಗಿದೆ. ಆ ಚಿತ್ರದ ಹೆಸರು ‘ಗೆರಿಲ್ಲಾ ವಾರ್‌’.</p><img><p>ಚಿತ್ರದಲ್ಲಿ ಉಪೇಂದ್ರ ಅವರದ್ದು ಸೈನಿಕನ ಪಾತ್ರ. ನಾಯಕಿಯಾಗಿ ನಿಮಿಕಾ ರತ್ನಾಕರ್‌ ಇದ್ದಾರೆ. ನಾದಬ್ರಹ್ಮ ಹಂಸಲೇಖ ಸಂಗೀತ ನೀಡುತ್ತಿದ್ದಾರೆ. ಡೆನ್ನಿಸಾ ಪ್ರಕಾಶ್‌ ಚಿತ್ರಕ್ಕೆ ಕತೆ ಬರೆದಿದ್ದಾರೆ. ಓಂಪ್ರಕಾಶ್‌ ರಾವ್‌ ಹಾಗೂ ಆರ್‌ ವಾಸುದೇವ ರೆಡ್ಡಿ ನಿರ್ಮಿಸುತ್ತಿದ್ದಾರೆ.</p><img><p>ಗೆರಿಲ್ಲಾ ವಾರ್‌ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದ್ದು, ಪೋಸ್ಟರ್​​ನಲ್ಲಿ ಉಪೇಂದ್ರ ಸೈನಿಕರ ಸಮವಸ್ತ್ರ ಧರಿಸಿ ಅತ್ಯಾಧುನಿಕ ಬಂದೂಕು ಹಿಡಿದು ಯಾವುದೋ ಮಿಲಿಟರಿ ಆಪರೇಷನ್​​​ನಲ್ಲಿ ತೊಡಗಿದ್ದಾರೆ.</p><img><p>ಗೆರಿಲ್ಲಾ ವಾರ್‌ ಹೆಸರೇ ಹೇಳುವಂತೆ ಇದೊಂದು ಪಕ್ಕಾ ಆಕ್ಷನ್ ಸಿನಿಮಾ ಆಗಿರಲಿದೆ. ವಿವಿಧ ದೇಶಗಳ ಸೈನ್ಯಗಳು ದೊಡ್ಡ ಪ್ರಮಾಣದ ವೈರಿಗಳನ್ನು ಎದುರಿಸಲು ಬಳಸುವ ಗೆರಿಲ್ಲಾ ವಾರ್‌ ಸಮರ ಪ್ರಾಕಾರವನ್ನು ಈ ಚಿತ್ರ ಆಧರಿಸಿದೆ.</p><img><p>ಉಪೇಂದ್ರ ಅವರು ಈ ಚಿತ್ರದಲ್ಲಿ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಸೈನಿಕ ಗಡಿ ಮಾತ್ರ ಕಾಯುವ ಸೈನಿಕನಲ್ಲ‌‌. ಪ್ರಸ್ತುತ ನಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಧೀಮಂತ ನಾಯಕ ಎಂದು ತಿಳಿದು ಬಂದಿದೆ.</p><img><p>ಇನ್ನು ನಿರ್ದೇಶಕ ಹಾಗೂ ನಟರಾದ ರಿಯಲ್‌ ಸ್ಟಾರ್‌ ಉಪೇಂದ್ರ ಅವರು ಸೆ.18-1968ರಂದು ಕುಂದಾಪುರದ ಸಮೀಪದಲ್ಲಿರುವ ಕೋಟೇಶ್ವರದಲ್ಲಿ ಜನಿಸಿದರು. 1992 ರಲ್ಲಿ ಬಿಡುಗಡೆಯಾದ ತರ್ಲೆನನ್ಮಗ ಚಿತ್ರದ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.</p><img><p>ಇದಕ್ಕೂ ಮು೦ಚೆ ಕಾಶೀನಾಥ್ ಜತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ನಾಯಕನಟರಾಗಿ ನಟಿಸಿದ ಮೊದಲ ಚಿತ್ರ ಎ. ತಮ್ಮ ವಿಶಿಷ್ಟ ಆಲೋಚನಾ ಲಹರಿಗಳು, ವಿಭಿನ್ನ ನಟನಾ ಶೈಲಿಗಳಿಂದ ಭಿನ್ನವಾಗಿ ನಿಲ್ಲುವ ಇವರು ಕನ್ನಡ ಚಿತ್ರರಂಗ ಕಂಡ ಅದ್ಭುತ ಪ್ರತಿಭೆ.</p>



Source link

Leave a Reply

Your email address will not be published. Required fields are marked *