Headlines

ಶಂಕರ್​ ನಾಗ್ ಬಯೋಪಿಕ್ ಬಗ್ಗೆ ಮಾತನಾಡಿದ ಉಪೇಂದ್ರ; ಸಿಕ್ತು ದೊಡ್ಡ ಅಪ್​ಡೇಟ್

ಶಂಕರ್​ ನಾಗ್ ಬಯೋಪಿಕ್ ಬಗ್ಗೆ ಮಾತನಾಡಿದ ಉಪೇಂದ್ರ; ಸಿಕ್ತು ದೊಡ್ಡ ಅಪ್​ಡೇಟ್


ಶಂಕರ್ ನಾಗ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ, ನಿರ್ಮಾಪಕ ಹಾಗೂ ನಿರ್ದೇಶಕ. ಅಪಘಾತದಲ್ಲಿ ಅವರು ನಿಧನ ಹೊಂದದೆ ಇದ್ದಿದ್ದರೆ ಕನ್ನಡ ಚಿತ್ರಕ್ಕೆ ಅದೆಷ್ಟು ಅದ್ಭುತ ಸಿನಿಮಾಗಳು ಸಿಗುತ್ತಿದ್ದವೋ. ಆದರೆ, ವಿಧಿ ಅದಕ್ಕೆ ಅವಕಾಶ ಕೊಡಲೇ ಇಲ್ಲ. ಸಣ್ಣ ವಯಸ್ಸಿನಲ್ಲೇ ಸಾಕಷ್ಟು ಸಾಧನೆ ಮಾಡಿ, ತರಾತುರಿಯಲ್ಲೇ ಅವರು ಹೋಗಿಬಿಟ್ಟರು. ಶಂಕರ್ ನಾಗ್ ಅವರ ಬಯೋಪಿಕ್ ಬಗ್ಗೆ ಉಪೇಂದ್ರ (ಉಪೇಂದ್ರ) ಮಾತನಾಡಿದ ವಿಡಿಯೋ ಒಂದು ವೈರಲ್ ಆಗಿದೆ.

ಬಯೋಪಿಕ್ ಮಾಡೋದು ಫಿಕ್ಷನ್ ಸಿನಿಮಾ ಮಾಡಿದಷ್ಟು ಸುಲಭವಲ್ಲ. ಸಾಮಾನ್ಯ ಸಿನಿಮಾಗಳಲ್ಲಿ ಕಥೆಯನ್ನು ನಿರ್ದೇಶಕರು ಮನಸ್ಸಿಗೆ ತೋಚಿದಂತೆ ಮಾಡಬಹುದು. ಈ ಬಗ್ಗೆ ಯಾರೂ ಪ್ರಶ್ನೆ. ಆದರೆ, ಬಯೋಪಿಕ್ ವಿಚಾರದಲ್ಲಿ ಆ ರೀತಿ ಆಗುವುದಿಲ್ಲ. ಏನು ಇದೆ ಅದನ್ನೇ ತೋರಿಸಲಾಯಿತು. ಈ ಚಾಲೆಂಜ್ ಸ್ವೀಕರಿಸಲು ಉಪೇಂದ್ರ ಸಿದ್ಧರಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ ವಿಡಿಯೋ ಗಮನ ಸೆಳೆದಿದೆ.

ನವೆಂಬರ್ 9 ಶಂಕರ್ ನಾಗ್ ಜನ್ಮದಿನ. ಈ ಸಂದರ್ಭದಲ್ಲಿ ಉಪೇಂದ್ರ ಅವರು ಮಾತನಾಡಿದರು. ‘ಹೋಮ್ ಮಿನಿಸ್ಟರ್ ಬಳಿ ಸಿನಿಮಾ ಬಗ್ಗೆ ಚರ್ಚೆ ಮಾಡಿದರೆ ಅವರು, ಶಂಕರ್ ನಾಗ್ ಬಯೋಪಿಕ್ ಮಾಡಿ ಎನ್ನುತ್ತಾರೆ. ಅದಕ್ಕೆ ಅನಂತ್ ನಾಗ್, ಗಾಯತ್ರಿ ಮೊದಲಾದವರು ಒಪ್ಪಿಗೆ ಪಡೆಯಬೇಕು. ಸ್ಕ್ರಿಪ್ಟ್ ರೆಡಿ ಮಾಡಬೇಕು. ಮೇರುಪರ್ವತಕ್ಕೆ ಎಲ್ಲಿಯೂ ಲೋಪ ಆಗದಂತೆ ಬಯೋಪಿಕ್ ಮಾಡಬೇಕು. ಕಮರ್ಷಿಯಲ್ ಆಗಿ ಕೂಡ ಇರಬೇಕು. ಅಭಿಮಾನಿಗಳಿಗೆ ಇಷ್ಟ ಆಗುವಂತೆ ಸಿನಿಮಾ ಮಾಡಬೇಕು’ ಉಪೇಂದ್ರ.

ಇದನ್ನೂ ಓದಿ: ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಕೇಸ್: ಆರೋಪಿ ಬಂಧನ; ಶಾಕಿಂಗ್ ವಿಚಾರ ಬಿಚ್ಚಿಟ್ಟ ಖಾಕಿ

ಉಪೇಂದ್ರ ಅವರು ‘ಯುಐ’ ಸಿನಿಮಾ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಕಳೆದ ವರ್ಷ ಡಿಸೆಂಬರ್ ನಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಅವರು ನಟನೆಯಲ್ಲಿ ಬ್ಯೂಸಿ ಇದ್ದಾರೆ. ‘ಕೂಲಿ’ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಇದಾದ ಬಳಿಕ ಅವರು ತಮ್ಮ ನಿರ್ದೇಶನದ ಯಾವುದೇ ಸಿನಿಮಾ ಘೋಷಣೆ ಮಾಡಿಲ್ಲ. ಅವರು ’45’ ಸಿನಿಮಾದ ಭಾಗ ಕೂಡ ಆಗಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ನಿರ್ದೇಶನವಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *