
ನಟ, ನಿರ್ದೇಶಕ ಉಪೇಂದ್ರ ಅವರು ಮತ್ತೆ ಪ್ರಜಾಕೀಯ (Prajaakeeya) ಕೆಲಸಗಳಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇಂದು (ಏಪ್ರಿಲ್ 1) ಅವರು ‘ದಿ ರಿಯಲ್ ಪ್ರಜಾಕೀಯ’ ಆಯಪ್ ಬಿಡುಗಡೆ ಮಾಡಿದರು. ಈ ವೇಳೆ ಅವರು ಸುದ್ದಿಗೋಷ್ಠಿ ನಡೆಸಿದರು. ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ. ಉಪೇಂದ್ರ ಯಾಕೆ ಚುನಾವಣೆಯಲ್ಲಿ ಇಲ್ಲ ಎಂಬ ಪ್ರಶ್ನೆ ಎದುರಾಯಿತು. ‘ಭಯ ಇದ್ದಿದ್ದರೆ ನಾನು ಇಷ್ಟೆಲ್ಲ ಮಾಡುತ್ತಿಲ್ಲ. ನನಗೆ ಆದಾಗ ನಾನು ಸ್ಪರ್ಧೆ ಮಾಡುತ್ತೇನೆ. ಇಲ್ಲ ಅಂತ ನಾನು ಹೇಳಿಲ್ಲ. ನೋಡೋಣ, ನನಗೂ ಸಮಯ ಸಿಗಬೇಕು. ನಾನು ಬಿಡುವು ಮಾಡಿಕೊಳ್ಳಬೇಕು. ಕಾರ್ಯಕರ್ತನ ರೀತಿ ಕೆಲಸ ಮಾಡಬೇಕು. ನಿಮ್ಮನ್ನೆಲ್ಲ ಭೇಟಿ ಮಾಡಿ ಅಭಿಪ್ರಾಯ ಕೇಳಬೇಕು. ಆ ಸಾಮರ್ಥ್ಯ ನನಗೆ ಇದೆಯಾ ಎಂದು ನೋಡಿಕೊಂಡು ಬರುತ್ತೇನೆ’ ಎಂದ ಉಪೇಂದ್ರ (ಉಪೇಂದ್ರ) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.