Headlines

ವರದಾ-ಬೇಡ್ತಿ ನದಿ ಪ್ರಾಜೆಕ್ಟ್ ಖಂಡಿಸಿ ಬೃಹತ್ ಪ್ರತಿಭಟನೆ: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ವರದಾ-ಬೇಡ್ತಿ ನದಿ ಪ್ರಾಜೆಕ್ಟ್ ಖಂಡಿಸಿ ಬೃಹತ್ ಪ್ರತಿಭಟನೆ: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್


ಶಿರಸಿ, (ಜನವರಿ 11) : ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಹರಿಯುವ ಅಘನಾಶಿನಿ-ಬೇಡ್ತಿ ನದಿ ತಿರುವು ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳು ಇಡೀ ಜಿಲ್ಲೆಗೆ ಮಾರಕ ಎಂದು ಜಿಲ್ಲೆಯ ಜನರ ಹೋರಾಟಕ್ಕೆ ಮುಂದಾಗಿದ್ದು, ಜಿಲ್ಲೆಯ ಶಿರಸಿಯಲ್ಲಿ ಜನ ಸಮಾವೇಶದ ಮೂಲಕ ಸಾವಿರಾರು ಜನರು ಸೇರಿ ಸರ್ಕಾರದ ನಡೆ ವಿರೋಧಿಸಿದ್ದಾರೆ. ಇಂದು (ಜನವರಿ 11) ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳು, ಮಠಾಧೀಶರು ಸೇರಿದಂತೆ ಸಾವಿರಾರು ಜನರು ಒಂದೆಡೆ ಸೇರಿ ಒಕ್ಕೊರಲಿನಿಂದ ಯೋಜನೆಗೆ ವಿರೋಧ ವ್ಯಕ್ತಪಡಿಸಿದರು.

ಇನ್ನು ಈ ಸಮಾವೇಶದಲ್ಲಿ ಸಮಾವೇಶದಲ್ಲಿ ಯೋಜನೆಯಿಂದ ಆಗುವ ಅಪಾಯದ ಬಗ್ಗೆ ಸಾರ್ವಜನಿಕರಿಗೆ ತಿಳಿಸಲಾಯಿತು. ಈ ಜಿಲ್ಲೆಯಲ್ಲಿ ಈ ಯೋಜನೆ ವಿರುದ್ಧ ಯಾವುದೇ ರಾಜಕೀಯ ಬೆರಸದೆ ಒಕ್ಕೊರಲಿನ ಹೋರಾಟವನ್ನು ನಿರ್ಣಯ ತೆಗೆದುಕೊಳ್ಳಲಾಗಿದೆ.

ಇದನ್ನೂ ನೋಡಿ: ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಖಡಕ್ ಎಚ್ಚರಿಕೆ

ಇನ್ನು ಇದೇ ವೇಳೆ ರಾಜಕೀಯ ಆರೋಪ ಪ್ರತ್ಯಾರೋಪ ಸಹ ನಡೆದಿದೆ. ಈ ಯೋಜನೆ ಯಡಿಯೂರಪ್ಪ ಸಿಎಂ ಆಗಿದ್ದಾಗಲೇ ಬಜೆಟ್ ನಲ್ಲಿ ಮಂಡನೆ ಮಾಡಿದ್ದು ಆಗ ಈಗಿನ ಸಂಸದರು ಸ್ಪೀಕರ್ ಆಗಿದ್ದರು ಎಂದು ಸಚಿವ ಮಂಕಾಳ ವೈದ್ಯ ಅವರು ಕಾಗೇರಿ ವಿರುದ್ಧ ಆರೋಪ ಮಾಡಿದ್ದಾರೆ. ಬಳಿಕ ಮಾತನಾಡಿದ ಕಾಗೇರಿ ಇದಕ್ಕೆ ಪರೋಕ್ಷವಾಗಿ ಟಾಂಗ್ ಕೊಟ್ಟು ತಮ್ಮ ನಿಲುವು ಸ್ಪಷ್ಟಪಡಿಸಿದರು. ಇನ್ನು ಇದೇ ವೇಳೆ ರಾಜಕೀಯ ನಾಯಕರು ಏನೆಲ್ಲಾ ಮಾತನಾಡುತ್ತಿದ್ದಾರೆ ಎನ್ನುವುದನ್ನು ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *