
<p>ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ತರಾನಾ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ನ ಯುವ ಮುಖಂಡನ ಮೇಲೆ ಹಲ್ಲೆ ನಡೆದ ನಂತರ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಎರಡು ಗುಂಪುಗಳ ನಡುವಿನ ಈ ಸಂಘರ್ಷದಲ್ಲಿ ವಾಹನಗಳು ಮತ್ತು ಮನೆಗಳ ಮೇಲೆ ಕಲ್ಲುತೂರಾಟ ನಡೆದು, ವ್ಯಾಪಕ ವಿಧ್ವಂಸಕ ಕೃತ್ಯಗಳು ವರದಿಯಾಗಿವೆ. </p><img><p>ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ತರಾನಾ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ನ ಯುವ ಮುಖಂಡರೊಬ್ಬರ ಮೇಲೆ ಹಲ್ಲೆ ನಡೆದ ಬೆನ್ನಲ್ಲೇ ತೀವ್ರ ಕೋಮು ಹಿಂಸಾಚಾರ ಸಂಭವಿಸಿದೆ. 2 ದಿನಗಳ ಕಾಲ ನಗರದಲ್ಲಿ ವ್ಯಾಪಕ ವಿಧ್ವಂಸಕ ಕೃತ್ಯಗಳು ನಡೆದಿದ್ದು, ವಾಹನಗಳು ಮತ್ತು ಮನೆಗಳ ಮೇಲೆ ಕಲ್ಲುತೂರಾಟ ವರದಿಯಾಗಿದೆ.</p><img><p>ಉಜ್ಜಯಿನಿಯು ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ. ಮೋಹನ್ ಯಾದವ್ ಅವರ ತವರು ಜಿಲ್ಲೆಯಾಗಿರುವುದರಿಂದ ಈ ಘಟನೆ ಹೆಚ್ಚು ಸೂಕ್ಷ್ಮತೆ ಪಡೆದುಕೊಂಡಿದೆ. ಗುರುವಾರ ರಾತ್ರಿ ವಿಎಚ್ಪಿ ಮುಖಂಡ ಸೋಹಲ್ ಠಾಕೂರ್ ಬುಂದೇಲಾ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿತ್ತು. ಅಲ್ಲಿಂದ 2 ಗುಂಪುಗಳ ನಡುವೆ ಸಂಘರ್ಷ ಆರಂಭವಾಗಿದೆ</p><img><p>ಕಿಡಿಗೇಡಿಗಳು ರಸ್ತೆಗಳಿದು ಕಲ್ಲುತೂರಾಟ ನಡೆಸಿ ಮೂಲಸೌಕರ್ಯಗಳ ಧ್ವಂಸದಲ್ಲಿ ತೊಡಗಿದ್ದಾರೆ. ಬಸ್ ಸ್ಟಾಂಡ್ನಲ್ಲಿದ್ದ ಕನಿಷ್ಠ 13 ಬಸ್ಗಳು ಮತ್ತು ಹಲವು ಬೈಕ್ಗಳಿಗೆ ಹಾನಿ ಮಾಡಿದ್ದಾರೆ. ನಂತರ ಪೊಲೀಸರು ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.</p><p>ಶುಕ್ರವಾರ ಪ್ರಾರ್ಥನೆ ಬಳಿಕ ಮತ್ತೆ ಸಂಘರ್ಷ ಗರಿಗೆದರಿದೆ. ಶಸ್ತ್ರಸಜ್ಜಿತರಾಗಿ ಬಂದ ಎರಡೂ ಬಣಗಳವರು ಪರಸ್ಪರರ ಮೇಲೆ ದಾಳಿ ನಡೆಸಿದ್ದಾರೆ. ಮನೆಗಳು, ಅಂಗಡಿಗಳು ಮತ್ತು ವಾಹನಗಳಿಗೂ ಹಾನಿ ಮಾಡಿದ್ದಾರೆ.</p><img><p>ಈ ನಡುವೆ, ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಬಂಧಿತರನ್ನು ಸಾರ್ವಜನಿಕವಾಗಿ ಮೆರವಣಿಗೆ ಮಾಡಬೇಕೆಂದು ಆಗ್ರಹಿಸಿ ಠಾಕೂರ್ ಪರ ಗುಂಪು ತರಾನಾ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದೆ.</p>
Source link
VHP ಮುಖಂಡನ ಮೇಲೆ ಹಲ್ಲೆ: ಹಿಂಸೆ, ಉದ್ವಿಗ್ನ ಪರಿಸ್ಥಿತಿ; ಹೊತ್ತಿ ಉರಿದ ತರಾನಾ ಪಟ್ಟಣ!