ನಟ ದರ್ಶನ್ (ದರ್ಶನ್) ಅವರು ಈಗ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಅವರು ಜೈಲಿನಲ್ಲಿ ಇರುವಾಗಲೇ ‘ದಿ ಡೆವಿಲ್’ (ದ ಡೆವಿಲ್) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಅಭಿಮಾನಿಗಳೇ ಪ್ರಚಾರ ಮಾಡಿದ್ದಾರೆ. ದರ್ಶನ್ ಕುಟುಂಬದ ಸದಸ್ಯರು ಕೂಡ ಸಿನಿಮಾದ ಕೆಲಸ ಪೂರ್ಣಗೊಳ್ಳುವಲ್ಲಿ ಶ್ರಮಿಸುತ್ತಿದ್ದಾರೆ. ಇಷ್ಟು ದಿನಗಳ ಕಾಲ ಮೌನವಾಗಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಈಗ ಮುರಿದಿದ್ದಾರೆ. ಇದೇ ಮೊದಲ ಬಾರಿಗೆ ಅವರ ದೀರ್ಘ ಸಂದರ್ಶನ (ವಿಜಯಲಕ್ಷ್ಮಿ ದರ್ಶನ್ ಸಂದರ್ಶನ) ಮಾಹಿತಿ.
ದರ್ಶನ್ ಅಭಿಮಾನಿಗಳ ‘ಡಿ ಕಂಪನಿ’ ಯೂಟ್ಯೂಬ್ ಚಾನೆಲ್ಗೆ ವಿಜಯಲಕ್ಷ್ಮಿ ದರ್ಶನ್ ಅವರು ಸಂದರ್ಶನ ನೀಡಿದ್ದಾರೆ. ನಟಿ ರಚನಾ ರೈ ಅವರು ಈ ಸಂದರ್ಶನ ಮಾಡಿದ್ದಾರೆ. ಅದರಲ್ಲಿ ಹಲವು ವಿಷಯಗಳ ಬಗ್ಗೆ ಅವರು ಮೌನ ಮುರಿದಿದ್ದಾರೆ. ದರ್ಶನ್ ಬದುಕಿನಲ್ಲಿ ಆದ ಕಹಿ ಘಟನೆಗಳ ಬಗ್ಗೆಯೂ ವಿಜಯಲಕ್ಷ್ಮಿ ಮಾತನಾಡಿದ್ದಾರೆ. ಜೊತೆಗೆ, ದರ್ಶನ್ ಅಭಿಮಾನಿಗಳ ಕುರಿತು ಕೂಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಈ ಸಂದರ್ಶನದ ಪ್ರೋಮೋ ಹಂಚಿಕೊಳ್ಳಲಾಗಿದೆ. ಸದ್ಯದಲ್ಲೇ ಪೂರ್ತಿ ಸಂದರ್ಶನದ ವಿಡಿಯೋ ಬಿಡುಗಡೆ ಆಗಲಿದೆ. ಕೆಲವು ಮುಖ್ಯವಾದ ಪ್ರಶ್ನೆಗಳಿಗೆ ವಿಜಯಲಕ್ಷ್ಮಿ ದರ್ಶನ್ ಅವರು ನೇರ ಉತ್ತರ ನೀಡಿದ್ದಾರೆ. ‘ದಿ ಡೆವಿಲ್ ಸಿನಿಮಾದ ಯಶಸ್ಸಿನಿಂದ ಬಹಳ ಖುಷಿಯಾಗುತ್ತಿದೆ. ದರ್ಶನ್ ಇಲ್ಲದೇ ಇದ್ದರೂ ಕೂಡ ಅಭಿಮಾನಿಗಳು ಅವರ ಸಿನಿಮಾವನ್ನು ಮತ್ತು ಅವರ ತಲೆ ಮೇಲೆ ಹೊತ್ತುಕೊಂಡು ಮೆರೆಸುತ್ತಾರೆ ಎಂಬುದಕ್ಕೆ ಇದು ಒಂದು ಉದಾಹರಣೆ’ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.
ವಿಜಯಲಕ್ಷ್ಮಿ ದರ್ಶನ್ ಸಂದರ್ಶನದ ಪ್ರೋಮೋ:
ಮಾಸ್ ಗು ಸೈ, ಕ್ಲಾಸ್ ಗೂ ಸೈ! ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸರ್ ರವರ ಧರ್ಮ ಪತ್ನಿ ಶ್ರೀಮತಿ “ವಿಜಯಲಕ್ಷ್ಮೀ ದರ್ಶನ್” ಅತ್ತಿಗೆ ಅವರು ನಮ್ಮ ಡಿ ಕಂಪನಿ ಯುಟ್ಯೂಬ್ ಚಾನೆಲ್ ಗೆ ನೀಡಿರುವ ವಿಶೇಷ ಸಂದರ್ಶನದ ಸಣ್ಣ ಝಲಕ್ ಇಲ್ಲಿದೆ! ಸಂಪೂರ್ಣ ಎಪಿಸೋಡ್ ನಾಳೆ ಬಿಡುಗಡೆಯಾಗಲಿದೆ
@ದಾಸದರ್ಶನ್ @vijayaananth2 pic.twitter.com/3to1RN4vza
– ಡಿ ಕಂಪನಿ(ಆರ್)ಅಧಿಕೃತ (@Dcompany171) ಡಿಸೆಂಬರ್ 13, 2025
ಎಲ್ಲವೂ ಚೆನ್ನಾಗಿ ನಡೆಯುತ್ತಿದ್ದಾಗ ದರ್ಶನ್ ಬದುಕಿನಲ್ಲಿ ಒಂದು ಶಾಕಿಂಗ್ ಘಟನೆ ಎದುರಾಯಿತು. ಆ ಬಗ್ಗೆ ಪ್ರತಿಕ್ರಿಯಿಸಿದ ವಿಜಯಲಕ್ಷ್ಮಿ ಅವರು, ‘ಈ ರೀತಿ ಆಗುತ್ತದೆ ಎಂದು ನಮಗೆ ಗೊತ್ತಿರಲಿಲ್ಲ. ನಾವು ಅದನ್ನು ನಿರೀಕ್ಷಿಸಿರಲಿಲ್ಲ’ ‘ಜನರು ನೆಗೆಟಿವ್ ಆಗಿ ಮಾತನಾಡಿದರೆ ನನಗೆ ಪರಿಣಾಮ ಬೀರಲ್ಲ. ಕಾರಣ ಶೇಕಡ 90ರಷ್ಟು ಜನರು ಪ್ರೀತಿ ತೋರಿಸಿದ್ದಾರೆ. ಅದು ಸಾಕು. ನೆಗೆಟಿವ್ ಕಮೆಂಟ್ಗಳನ್ನು ನಾನು ಓದುವುದೇ ಇಲ್ಲ’ ವಿಜಯಲಕ್ಮಿ ದರ್ಶನ.
ಇದನ್ನೂ ಓದಿ: ‘ದಿ ಡೆವಿಲ್’ ನೋಡಿ ವಿಶೇಷ ವಿಮರ್ಶೆ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್
‘ಮಹಿಳೆಯರಿಗೆ ಯಾವ ರೀತಿ ಗೌರವ ಕೊಡಬೇಕು ಎಂಬುದು ದರ್ಶನ್ ಅಭಿಮಾನಿಗಳಿಗೆ ಚೆನ್ನಾಗಿ ಗೊತ್ತಿದೆ. ನಮ್ಮ ಸೆಲೆಬ್ರಿಟಿಸ್ (ಫ್ಯಾನ್ಸ್) ಬಳಿ ಹಣ ಸಂಗ್ರಹ ಮಾಡಿ ಒಂದು ಶಾಲೆ ಶುರು ಮಾಡೋಣ. ಅವರನ್ನು ಈಗ ಅನಕ್ಷರಸ್ಥರು ಅಂತ ಯಾರೆಲ್ಲಾ ಹೇಳುತ್ತಿದ್ದಾರೋ ಅವರನ್ನೇ ಕರೆದುಕೊಂಡು ಬಂದು ದಯವಿಟ್ಟು ಶಿಕ್ಷಣ ನೀಡಿ ಅಂತ ಹೇಳೋಣ’ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 8:15 am, ಭಾನುವಾರ, 14 ಡಿಸೆಂಬರ್ 25