ಕೋಳಿಫಾರಂ ದುವಾರ್ಸನೆಯಿಂದ ಬೇಸತ್ತು ಕೋಳಿ, ಮೊಟ್ಟೆಗಳನ್ನು ಕದ್ದೊಯ್ದಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದಲ್ಲಿ ನಡೆದಿದೆ. ಕೋಳಿಫಾರಂನಿಂದ ಬರುತ್ತಿದ್ದ ದುವಾರ್ಸನೆಯಿಂದ ಉಣಚಗೇರಿ ಗ್ರಾಮಸ್ಥರು ರೋಸಿ ಹೋಗಿದ್ದರು. ಹೀಗಾಗಿ ಗ್ರಾಮದಿಂದ ಕೋಳಿಫಾರಂಗಾಗಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಜನರು ತಾಳ್ಮೆಯ ಕಟ್ಟೆ ಹೊಡೆದಿದ್ದು, ಗ್ರಾಮಸ್ಥರೇ ಕೋಳಿಫಾರಂಗೆ ನುಗ್ಗಿ ಕೋಳಿ, ಮೊಟ್ಟೆ ಕದ್ದುಕೊಂಡು ಹೋಗಿದ್ದಾರೆ. ಇದರ ಮಾಲೀಕ ಕಂಗಾಲಾಗಿದ್ದಾನೆ.
Published on: Dec 25, 2025 09:27 PM