
ಬೆಂಗಳೂರು, ಮಾರ್ಚ್ 19: ಬೆಂಗಳೂರು (ಬೆಂಗಳೂರು) ಸೇರಿದಂತೆ ಕರ್ನಾಟಕದ ಹಲವೆಡೆ ಬುಧವಾರ ರಾತ್ರಿ ಭಾರಿ ಮಳೆ ಸುರಿದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ) ಅದರಲ್ಲಿಯೂ ಭಾರಿ ಮಳೆಯಾಗಿದೆ. ಕೆಲವು ಬೆಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಬೇರೆಡೆಗೆ ಕಳುಹಿಸಲಾಗಿದೆ. ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್ ನಲ್ಲಿ ಮೇಲ್ಛಾವಣಿಯ ನೀರು ಸೋರಿದ ಹಾಗೂ ಪೈಪ್ ಒಡೆದು ನೀರು ಚಿಮ್ಮಿದ ವಿಡಿಯೋವೊಂದು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಕರ್ನಾಟಕ ಫೋಲಿಯೋ ಎಂಬ ಎಕ್ಸ್ ಹ್ಯಾಂಡಲ್ನಲ್ಲಿ ಹಂಚಲಾದ ವಿಡಿಯೋದಲ್ಲಿ, ಏರ್ಪೋರ್ಟ್ ಟರ್ಮಿನಲ್ನ ಮೇಲ್ಛಾವಣಿಯಿಂದ ನೀರು ಸುರಿಯುತ್ತಿದೆ. ಹೊರಭಾಗಗಳಲ್ಲಿ ಪೈಪ್ಗಳಿಂದ ನೀರು ಹೊರಬಂದು ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ತುಂಬಿರುವ ದೃಶ್ಯಗಳು ಕಂಡುಬರುತ್ತವೆ. ಈ ಕಾರಣದಿಂದ ಪ್ರಯಾಣಿಕರಿಗೆ ಅಸೌಕರ್ಯ ಉಂಟಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.
ಕರ್ನಾಟಕ ಪೋರ್ಟ್ ಫೋಲಿಯೋ ಎಕ್ಸ್ ವಿಡಿಯೋ
ಇಂದಿನ ಮಳೆಯು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕೆಲವು ಭಾಗಗಳನ್ನು ಮಿನಿ ಜಲಪಾತದಂತೆ ಭಾಸವಾಯಿತು, ಸೀಲಿಂಗ್ನಿಂದ ನೀರು ಜಿನುಗುತ್ತಿದೆ ಮತ್ತು ಒಳಚರಂಡಿ ಪೈಪ್ಗಳಿಂದ ವಿಮಾನ ನಿಲ್ದಾಣದ ಹೊರಭಾಗಕ್ಕೆ ಬರುತ್ತಿದೆ. ಇದು ಪ್ರಯಾಣಿಕರಿಗೆ ಅನನುಕೂಲತೆಯನ್ನು ಉಂಟುಮಾಡಿದೆ-ಎಂಬ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ, … pic.twitter.com/dURYIyoK50
— ಕರ್ನಾಟಕ ಪೋರ್ಟ್ಫೋಲಿಯೋ (@karnatakaportf) ಮಾರ್ಚ್ 18, 2026
‘ಮಳೆಯ ಪರಿಣಾಮ ವಿಮಾನ ನಿಲ್ದಾಣದಲ್ಲಿ ಮಿನಿ ಜಲಪಾತದಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ನಿರ್ವಹಣೆ ಎಲ್ಲಿದೆ’ ಎಂದು ಕರ್ನಾಟಕ ಪೋರ್ಟ್ ಫೋಲಿಯೋ ಎಕ್ಸ್ ತಾಣದಲ್ಲಿ ಪ್ರಶ್ನಿಸಲಾಗಿದೆ.
ಮೂಲಗಳ ಪ್ರಕಾರ, ಟರ್ಮಿನಲ್ 1 ರ ಭಾಗದ ವಸ್ತು ಸೊರಿಕೆ, ಪೈಪ್ ಒಡೆದು ನೀರು ಹೊರಕ್ಕೆ ಚಿಮ್ಮಿದೆ. ಆದರೆ, ವೈರಲ್ ಆಗಿರುವ ಈ ವಿಡಿಯೋ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳು ಈವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.
ಬೆಂಗಳೂರು ವಿಮಾನ ನಿಲ್ದಾಣವು ಇಂತಹ ದೃಶ್ಯಗಳಿಗೆ ಸಾಕ್ಷಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ವಿಮಾನ ನಿಲ್ದಾಣದ ಸೋರುತ್ತಿರುವ ಮತ್ತು ನೀರು ಟರ್ಮಿನಲ್ನಲ್ಲಿ ನೀರು ಸಂಗ್ರಹವಾಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ. 2024 ರ ಮೇ ತಿಂಗಳಿನಲ್ಲಿಯೂ ಸಹ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರ ಗುಂಡಿಯಲ್ಲಿ ಬಿರುಕುಗಳು ಕಾಣಿಸಿಕೊಂಡವು. ಒಟ್ಟಾರೆ ಮಳೆ ನೀರು ಸೋರಿಕೆಯಾಗಿತ್ತು. ಇದೀಗ ಮತ್ತೆ ಅಂಥದ್ದೇ ವಿಡಿಯೋ ವೈರಲ್ ಆಗಿರುವುದು ಮಹಾನಗರದ ಮೂಲಸೌಕರ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಇದನ್ನೂ ಓದಿ: ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್
ಒಟ್ಟಿನಲ್ಲಿ, ಮಳೆ ಬಂದಾಗ ಎಲ್ಲಾ ಏರ್ಪೋರ್ಟ್ ಮೂಲಸೌಕರ್ಯ ಮತ್ತು ನಿರ್ವಹಣೆ ಕುರಿತು ಪ್ರಶ್ನೆಗಳು ಎದ್ದು ಕಾಣುತ್ತಿರುವುದು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ