
ಮಡಿಕೇರಿ, (ಏಪ್ರಿಲ್ 06): ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್ಗೆ (ಇರಾನ್) ಮರಳಲಾಗದ ಕೊಡಗು (ಕೊಡಗು) ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ ನವೀನ ಹಾಗೂ ಇರಾನ್ ಮೂಲದ ಪತಿ ನಾದರ್ ಕೊಡಗಿನಲ್ಲಿಯೇ ಸಿಲುಕಿರುವ ದಂಪತಿ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಹಲವು ದೇಶಗಳ ವಾಯು ಪ್ರದೇಶ ಬಂದ್ ಆಗಿದ್ದು, ವಿಮಾನ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಹೀಗಾಗಿ ದಂಪತಿ ಕೊಡಗಿನಲ್ಲಿಯೇ ಉಳಿಯುತ್ತದೆ.
ಕೊಡಗು ಮೂಲದ ನವೀನ, 30 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಆ ವೇಳೆ ಇರಾನ್ನ ನಾದರ್ನೊಂದಿಗೆ ಪರಿಚಯವಾಗಿದ್ದು, ಬಳಿಕ ಪ್ರೀತಿಸಿ ವಿವಾಹವಾದರು. ನಂತರ ದಂಪತಿ ಇರಾನ್ನ ಬೋಜ್ನೂರ್ ಪ್ರದೇಶದಲ್ಲಿ ನೆಲೆಸಿತ್ತು. ಆದರೆ, ಇದೀಗ ದೀರ್ಘ ರಜೆಗೆಂದು ಇರಾನ್ ನಿಂದ ತವರುಮನೆ ಕೊಡಗಿಗೆ ಆಗಮಿಸಿದ್ದು, ಇಲ್ಲೇ ಸಿಲುಕಿ ಪರದಾಡುವಂತಾಗಿದೆ.
ಇದನ್ನೂ ನೋಡಿ: ಬಾವಿಗೆ ಬಿದ್ದು 3 ದಿನ ಬಳಿಕ ಬದುಕಿ ಬಂದ ವೃದ್ಧ: ಗ್ಯಾಸ್ ಸಿಲಿಂಡರ್ OTP ವ್ಯಕ್ತಿಯ ಜೀವ ಉಳಿಸಿದೆ ಗೊತ್ತಾ?
ದಂಪತಿಗೆ ಇಬ್ಬರು ಮಕ್ಕಳಿದ್ದು ಒಬ್ಬರು, ಸಿವಿಲ್ ಇಂಜಿನಿಯರ್ ಆಗಿದ್ದು, ಮತ್ತೊಬ್ಬರು ಆರ್ಕಿಟೆಕ್ಟ್ (ವಾಸ್ತುಶಿಲ್ಪಿ) ಆಗಿದ್ದಾರೆ. ಈ ಕುಟುಂಬವು ಇರಾನಿನಲ್ಲಿ ದಾಳಿಂಬೆ, ಗ್ರೇಪ್, ಆಪಲ್, ಬ್ಲೂಬೆರಿ, ಬಾದಾಮಿ, ಏಪ್ರಿಕೋಟ್, ಖರ್ಜೂರ, ಪಿಸ್ತಾ ಸೇರಿದಂತೆ ಹಲವು ವಿದೇಶಿ ಹಣ್ಣುಗಳ ಫಾರ್ಮ್ಗಳನ್ನು ಹೊಂದಿದ್ದು, ಜೊತೆಗೆ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದಾರೆ.
ಪ್ರತಿ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಕೊಡಗಿಗೆ ಬರುತ್ತಿದ್ದ ದಂಪತಿ, ಮಾರ್ಚ್ನಲ್ಲಿ ಮರಳಿ ಇರಾನ್ಗೆ ತೆರಳುತ್ತಿದ್ದರು. ಈ ಬಾರಿಯೂ ಡಿಸೆಂಬರ್ನಲ್ಲಿ ಕೊಡಗಿಗೆ ಬಂದಿದ್ದು, ಮಾರ್ಚ್ 16 ರಂದು ಬೆಂಗಳೂರಿನಿಂದ ಶಾರ್ಜಾ ಮೂಲಕ ಇರಾನ್ನ ಬೋಜ್ನೂರ್ಗೆ ತೆರಳಲು ವಿಮಾನ ಟಿಕೆಟ್ ಬುಕ್ ಮಾಡಲಾಗಿದೆ. ಆದರೆ ಅಮೆರಿಕ–ಇರಾನ್ ಯುದ್ಧದ ಪರಿಣಾಮವಾಗಿ ವಿಮಾನ ರದ್ದಾಯಿತು. ನಂತರ ಏಪ್ರಿಲ್ 15 ರಂದು ಮತ್ತೊಮ್ಮೆ ಪ್ರಯಾಣ ಬುಕ್ ಮಾಡಲಾಗಿತ್ತು, ಆ ವಿಮಾನವೂ ರದ್ದಾಗಿದೆ. ಈ ದಂಪತಿಗಳು ಈಗ ಕೊಡಗಿನಲ್ಲೇ ಉಳಿದಿದೆ.
ಇನ್ನೂ ನವೀನ ಪತಿ ನಾದೀರ್ ಪಾಸ್ಪೋರ್ಟ್ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಅದರೊಳಗೆ ಇವರು ಇರಾನ್ ತೆರಳಬೇಕಾಗಿದೆ. ಇವರಿಬ್ಬರ ಇಬ್ಬರು ಮಕ್ಕಳು ಇರಾನ್ ನಲ್ಲೇ ಉಳಿದುಕೊಂಡಿದ್ದು, ಸಂಪರ್ಕ ಸಾಧ್ಯವಾಗುತ್ತಿಲ್ಲ. ಇಂಟರ್ನೆಟ್ ಸ್ಥಗಿತವಾಗಿರುವುದು ಅವರಾಗಿಯೇ ಇವರಿಗೆ ಮೆಸೇಜ್ ಮಾಡುವವರೆಗೂ ಸಂಪರ್ಕ ಸಾಧ್ಯವಾಗಲಿಲ್ಲ. ಇನ್ನು ಯುದ್ಧದ ಬಗ್ಗೆ ಪ್ರತಿಕ್ರಿಯೆ ನೀಡಿದ ನಾದೀರ್ ಅಜೀಜಿ, ನನ್ನ ಪ್ರೀತಿಯ ದೇಶ ಮತ್ತು ಜನರ ಬಗ್ಗೆ ಬಹಳ ಚಿಂತೆಯಾಗಿದೆ. ಇಂತಹ ಸಂದರ್ಭದಲ್ಲಿ ನಾವು ಅಲ್ಲಿರಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.