Headlines

ಕನ್ನಡ ಚಿತ್ರರಂಗದಲ್ಲಿ ಯಾರಿಗೆ ಸಿಕ್ಕಿದೆ ರಶ್ಮಿಕಾ-ವಿಜಯ್ ಮದುವೆ ಆಹ್ವಾನ?

ಕನ್ನಡ ಚಿತ್ರರಂಗದಲ್ಲಿ ಯಾರಿಗೆ ಸಿಕ್ಕಿದೆ ರಶ್ಮಿಕಾ-ವಿಜಯ್ ಮದುವೆ ಆಹ್ವಾನ?


ಕನ್ನಡತಿ ರಶ್ಮಿಕಾ ಮಂದಣ್ಣ (ರಶ್ಮಿಕಾ ಮಂದಣ್ಣ) ತೆಲಂಗಾಣ ಯುವಕ ವಿಜಯ್ ದೇವರಕೊಂಡ ವಿವಾಹವಾಗಿದ್ದಾರೆ. ನಾಳೆ (ಫೆಬ್ರವರಿ 26) ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹ ನಡೆಯಲಿದೆ, ಇಂದು ಸಂಗೀತ ಕಾರ್ಯಕ್ರಮ ಆಯೋಜನೆಯಾಗಿದೆ. ಬಲು ಅದ್ಧೂರಿಯಾಗಿ ಮದುವೆ ನಡೆಯುತ್ತಿರುವುದು ವಧು-ವರರಿಗೆ ಆಪ್ತವಾಗಿರುವ ಕೆಲವು ಸಿನಿಮಾ ಸೆಲೆಬ್ರಿಟಿಗಳ ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಕನ್ನಡದ ನಟಿ ಆಶಿಕಾ ರಂಗನಾಥ್ ಅವರು ಸಹ ಮದುವೆ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ. ಅವರ ಹೊರತಾಗಿ ಕನ್ನಡ ಚಿತ್ರರಂಗಕ್ಕೆ ಇನ್ಯಾರಿಗೂ ಆಹ್ವಾನ ಇಲ್ಲವೇ ಎಂಬ ಪ್ರಶ್ನೆ ಎದುರಾಗಿತ್ತು. ಅದಕ್ಕೀಗ ಉತ್ತರ ದೊರಕಿದೆ.

ಮೂಲಗಳ ಪ್ರಕಾರ ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರರಂಗದ ಹಲವು ಪ್ರಮುಖ ನಟ, ನಟಿಯರು ಮತ್ತು ನಿರ್ದೇಶಕರಿಗೆ ಆಹ್ವಾನ ನೀಡಿದ್ದಾರೆ ಆದರೆ ಮದುವೆಗೆ ಬದಲಾಗಿ ರಿಸೆಪ್ಷನ್ ಗೆ ಕುಟುಂಬಕ್ಕೆ ಮತ್ತು ಬಹಳ ಆಪ್ತವಾಗಿರುವ ಕೆಲವು ಸ್ನೇಹಿತರನ್ನು ಮದುವೆ ಇನ್ಯಾರಿಗೂ ಆಹ್ವಾನ ನೀಡಿಲ್ಲ. ಆದರೆ ಮಾರ್ಚ್ 4 ರಂದು ನಡೆಯಲಿರುವ ಅದ್ಧೂರಿ ರಿಸೆಪ್ಷನ್‌ಗೆ ತೆಲುಗು, ಬಾಲಿವುಡ್ ಮತ್ತು ಸ್ಯಾಂಡಲ್ ವುಡ್‌ನ ಹಲವು ನಟ-ನಟಿಯರಿಗೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಆಹ್ವಾನ.

ಕನ್ನಡ ಚಿತ್ರರಂಗದವರಾದರೂ ನಾನಾ ಕಾರಣಗಳಿಂದ ಕನ್ನಡ ಚಿತ್ರರಂಗದಿಂದ ದೂರವೇ ಉಳಿದಿರುವ ರಶ್ಮಿಕಾ ತಮ್ಮ ಮದುವೆಗೂ ಕನ್ನಡ ಚಿತ್ರರಂಗದ ಯಾರನ್ನೂ ಆಹ್ವಾನಿಸಿಲ್ಲ, ಶೆಟ್ಟಿ ಗ್ಯಾಂಗಿನ ಪ್ರಮೋದ್ ಶೆಟ್ಟಿ ಅವರಂತೂ ರಶ್ಮಿಕಾ ನಮ್ಮನ್ನು ಕರೆಯುವುದಿಲ್ಲ ಎಂಬುದು ಗೊತ್ತಿರುವುದೇ ಎಂದು ವ್ಯಂಗ್ಯವಾಡಿದ್ದರು. ಆದರೆ ರಶ್ಮಿಕಾ ಅವರು ಕನ್ನಡ ಚಿತ್ರರಂಗದ ಕೆಲವು ಪ್ರಮುಖ ನಟ-ನಟಿಯರಿಗೆ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ:ವಿಜಯ್ ಪಾಲಕರು ರಶ್ಮಿಕಾ ಮಂದಣ್ಣಗೆ ಹಾಕಿದ ಷರತ್ತು ಏನು?

ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಯಶ್, ಅಶ್ವಿನಿ ಪುನೀತ್ ರಾಜ್ ಕುಮಾರ್, ಆಶಿಕಾ ರಂಗನಾಥ್, ರವಿಚಂದ್ರನ್, ಧ್ರುವ ಸರ್ಜಾ, ಗಣೇಶ್, ನಿರ್ದೇಶಕರಾದ ಎ ಹರ್ಷ, ನಂದ ಕಿಶೋರ್, ಸಿಂಪಲ್ ಸುನಿ ಸೇರಿ ಒಟ್ಟು 11 ಜನರಿಗೆ ಆರತಕ್ಷತೆಯ ಆಮಂತ್ರಣ ಪತ್ರಿಕೆಯನ್ನು ರಶ್ಮಿಕಾ ಮಂದಣ್ಣ ತಲುಪಿಸಿದ್ದಾರೆ. ಇದರ ಜೊತೆಗೆ ಖುದ್ದು ಸಂದೇಶ ಕಳಿಸಿ ಆರತಕ್ಷತೆಗೆ ಆಹ್ವಾನ. ಗಮನಿಸಬೇಕಾದ ಅಂಶವೆಂದರೆ ರಶ್ಮಿಕಾರನ್ನು ಚಿತ್ರರಂಗಕ್ಕೆ ಲಾಂಚ್ ಮಾಡಿದ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಅಥವಾ ಒಟ್ಟಾರೆ ಶೆಟ್ಟಿ ಗ್ಯಾಂಗಿಗೆ ಆಹ್ವಾನವನ್ನು ರಶ್ಮಿಕಾ ನೀಡಿಲ್ಲ.

ಆಹ್ವಾನ ಸಿಕ್ಕಿರುವ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಲ್ಲಿ ನಟಿ ಆಶಿಕಾ ರಂಗನಾಥ್ ಮದುವೆಗೆ ತೆರಳಿದ್ದಾರೆ. ಆರತಕ್ಷತೆಗೆ ಯಾರ್ಯಾರು ಹೋಗಲಿದ್ದಾರೆ ಎಂಬುದು ಮಾರ್ಚ್ 04 ರಂದು ತಿಳಿಯಲಿದೆ. ಮಾರ್ಚ್ 04 ರಂದು ಹೈದರಾಬಾದ್‌ನ ತಾಜ್ ಕೃಷ್ಣ ಐಶಾರಾಮಿ ಹೋಟೆಲ್‌ನಲ್ಲಿ ಆರತಕ್ಷತೆ ಜಾರಿಯಲ್ಲಿದೆ. ತೆಲುಗು ಚಿತ್ರರಂಗದ ಹಲವಾರು ಮಂದಿ ಸೆಲೆಬ್ರಿಟಿಗಳು, ಬಾಲಿವುಡ್ನ ಸೆಲೆಬ್ರಿಟಿಗಳ ಜೊತೆಗೆ ಆಂಧ್ರ ಮತ್ತು ತೆಲಂಗಾಣದ ರಾಜಕಾರಣಿಗಳು ಸಹ ಆರತಕ್ಷತೆಯಲ್ಲಿ ಭಾಗವಹಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *