ಕೊಲೆಗೂ ಮುನ್ನ 6 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ಯುಸೂಫ್ ಮೀರ್
ಬೆಂಗಳೂರು, ಜನವರಿ 11: ಬೆಂಗಳೂರು ವೈಟ್ಫೀಲ್ಡ್ನಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಹಿಸುಕಿ ಕೊಲ್ಲಲಾಯಿತು. ತಾಯಿಯ ಮೇಲಿನ ದ್ವೇಷಕ್ಕೆ ಕೊಂದ ಪಾಪಿ ಚರಂಡಿಗೆ ಬಿಸಾಕಿದ್ದ. ಈ ಕೊಲೆ ಪ್ರಕರಣದ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಕೊಲೆಗೂ ಮುನ್ನ ಪುಟ್ಟ ಬಾಲಕಿಯ ಮೇಲೆ ಆರೋಪಿ ಅತ್ಯಾಚಾರವೆಸಗಿರುವುದು ಗೊತ್ತಾಗಿದೆ. ಆರೋಪಿಯು ಈ ಹಿಂದೆಯೂ ಮಕ್ಕಳ ಮೇಲೆ ದೌರ್ಜನ್ಯ ನಡೆಸಿದ್ದನೆಂಬುದು ವಿಚಾರಣೆ ವೇಳೆ ತಿಳಿದುಬಂದಿದ್ದು, ಪೋಕ್ಸೋ ಪ್ರಕರಣ ದಾಖಲಾಗಿದೆ.
ಶವವನ್ನು ರಸ್ತೆ ಬದಿಯ ಚರಂಡಿಗೆ ಎಸೆದಿದ್ದ
ಬಾಲಕಿಯ ಕೊಲೆ ಪ್ರಕರಣದಲ್ಲಿ ಯೂಸೂಫ್ ಮೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಾಯಿಯನ್ನು ಜಗಳ ಮಾಡಿಕೊಂಡ ಆರೋಪಿಯು ಕಿಡ್ನಾಪ್ ಮಾಡಿದ್ದ. 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ್ದ ಪಾಪಿ, ನಂತರ ಪ್ಲಾಸ್ಟಿಕ್ ವೈರ್ ಬಳಸಿ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ. ಕೊಲೆಯ ನಂತರ ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ರಸ್ತೆ ಬದಿಯ ಚರಂಡಿಗೆ ಎಸೆದಿದ್ದಾನೆ ಎಂದು ತನಿಖೆಯಲ್ಲಿ ದೃಢಪಟ್ಟಿದೆ.
ಬಾಲಕಿ ನಾಪತ್ತೆಯಾದ ಒಂದು ದಿನದ ಬಳಿಕ ದೂರು ನೀಡಿದ್ದು, ದೂರು ದಾಖಲಾದ ಹನ್ನೆರಡು ಗಂಟೆಗಳವರೆಗೆ ರಸ್ತೆ ಬದಿಯ ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಇತ್ತು. ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾತ್ರ ನಡೆದಿರುವ ಅನುಮಾನ ಇತ್ತು. ಆದರೆ ತನಿಖೆಯಲ್ಲಿ ಅತ್ಯಾಚಾರ ಬಳಿಕ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ!
ಮಕ್ಕಳ ಮೇಲೆ ದೌರ್ಜನ್ಯವೆಸಗುತ್ತಿದ್ದ ಆರೋಪಿ
ಪೊಲೀಸ್ ತನಿಖೆಯಲ್ಲಿ ಯುಸೂಫ್ ಮೀರ್ ವಿರುದ್ಧ ಎರಡು ಗಂಭೀರ ಪ್ರಕರಣಗಳು ಕಂಡುಬಂದಿರುವುದು ಗೊತ್ತಾಗಿದೆ. ಪಶ್ಚಿಮ ಬಂಗಾಳದಲ್ಲಿ ಒಬ್ಬ ಪೋಕ್ಸೋ ಹಾಗೂ ಮತ್ತೊಂದು ಮಹಿಳೆಯ ಮೇಲೆ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಸದ್ಯ ಆರೋಪಿಯನ್ನು ಪಶ್ಚಿಮ ಬಂಗಾಳದಿಂದ ಬಂಧಿಸಿ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಯೂಸೂಫ್ ಮಕ್ಕಳ ಮೇಲೆ ವೈದ್ಯರು ನಡೆಸುವ ದೌರ್ಜ್ಯನ್ಯ ನಡೆಸುವ ವ್ಯಕ್ತಿ ಎಂಬುದು ತನಿಖೆಯಲ್ಲಿ ತಿಳಿದುಬಂದಿದ್ದು, ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.