
<p>ಬೆಂಗಳೂರು: ಟೀಂ ಇಂಡಿಯಾ ಯುವ ವೇಗದ ಬೌಲರ್ ಹರ್ಷಿತ್ ರಾಣಾ, ಭಾರತದ ಮೂರು ಮಾದರಿಯ ತಂಡದಲ್ಲಿ ಪದೇ ಪದೇ ಸ್ಥಾನ ಪಡೆಯುತ್ತಿದ್ದಾರೆ. ಇದು ಹಲವು ಮಾಜಿ ಕ್ರಿಕೆಟಿಗರ ಟೀಕೆಗೂ ಕಾರಣವಾಗಿದೆ. ಆದರೆ ನಿಜಕ್ಕೂ ಹರ್ಷಿತ್ ರಾಣಾ ಸ್ಥಾನ ಪಡೆಯುತ್ತಿರೋದೇಕೆ ಎನ್ನುವುದು ಬಯಲಾಗಿದೆ.</p><p> </p><img><p>ಹರ್ಷಿತ್ ರಾಣಾ, ಆಸ್ಟ್ರೇಲಿಯಾ ಎದುರಿನ ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ವ್ಯಾಪಕ ಟೀಕೆಯ ಹೊರತಾಗಿಯೂ ಹರ್ಷಿತ್ ರಾಣಾ ಭಾರತದ ಮೂರು ಮಾದರಿಯ ತಂಡದಲ್ಲಿ ನಿರಂತರವಾಗಿ ಸ್ಥಾನ ಪಡೆಯುತ್ತಾ ಬಂದಿದ್ದಾರೆ.</p><img><p>ಹರ್ಷಿತ್ ರಾಣಾ 2024ರ ಐಪಿಎಲ್ನಲ್ಲಿ ಕೋಲ್ಕತಾ ನೈಟ್ರೈಸರ್ಸ್ ಚಾಂಪಿಯನ್ ತಂಡದ ಸದಸ್ಯರಾಗಿದ್ದರು. ಗೌತಮ್ ಗಂಭೀರ್ ಅವರ ನೀಲಿಗಣ್ಣಿನ ಹುಡುಗ ಎಂದೇ ಬಿಂಬಿತವಾಗಿರುವುದರಿಂದಲೇ ಹರ್ಷಿತ್ ರಾಣಾಗೆ ಪದೇ ಪದೇ ಭಾರತ ತಂಡದಲ್ಲಿ ಸ್ಥಾನ ಸಿಗುತ್ತಿದೆ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.</p><img><p>ಹರ್ಷಿತ್ ರಾಣಾ 2024ರ ನವೆಂಬರ್ನಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ಇದಾದ ಬಳಿಕ 2025ರ ಜನವರಿಯಲ್ಲಿ ಭಾರತ ಟಿ20 ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ. ಇದಾದ ನಂತರ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ರಾಣಾ ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ.</p><img><p>ಹರ್ಷಿತ್ ರಾಣಾ ಇದುವರೆಗೂ ಭಾರತ ಪರ 2 ಟೆಸ್ಟ್ನಿಂದ 4 ವಿಕೆಟ್, ಮೂರು ಟಿ20 ಪಂದ್ಯಗಳಿಂದ 10ರ ಎಕನಮಿಯಲ್ಲಿ 5 ವಿಕೆಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿ 10 ವಿಕೆಟ್ ಕಬಳಿಸಿದ್ದಾರೆ.</p><img><p>ಹರ್ಷಿತ್ ರಾಣಾ ಅವರನ್ನು ಆಸ್ಟ್ರೇಲಿಯಾ ಎದುರಿನ ಸೀಮಿತ ಓವರ್ಗಳ ಸರಣಿಗೆ ಆಯ್ಕೆ ಮಾಡುತ್ತಿದ್ದಂತೆಯೇ ಹಲವು ಮಾಜಿ ಕ್ರಿಕೆಟಿಗರು ಹಾಗೂ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಟ್ರೋಲ್ ಮಾಡಲಾರಂಭಿಸಿದ್ದಾರೆ.</p><img><p>ಆದರೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ರವಿಚಂದ್ರನ್ ಅಶ್ವಿನ್ ಹಾಗೂ ಆಕಾಶ್ ಚೋಪ್ರಾ, ಹರ್ಷಿತ್ ರಾಣಾ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.</p><img><p>ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು, ಹರ್ಷಿತ್ ರಾಣಾ ಅವರ ಸಾಮರ್ಥ್ಯ, ಬ್ಯಾಟಿಂಗ್ ಸ್ಕಿಲ್, ಅವರ ಎತ್ತರ ಹಾಗೂ ವೇಗದ ಬೌಲಿಂಗ್ ಎಲ್ಲವನ್ನು ಗಮನಿಸಿ ಅವರಿಗೆ ಹೆಚ್ಚು ಹೆಚ್ಚು ಅವಕಾಶ ನೀಡಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>
Source link
ಹರ್ಷಿತ್ ರಾಣಾಗೆ ಪದೇ ಪದೇ ಭಾರತ ತಂಡದಲ್ಲಿ ಸ್ಥಾನ ಸಿಗುತ್ತಿರುವುದೇಕೆ? ಕೊನೆಗೂ ಬಯಲಾಯ್ತು ಸತ್ಯ