
ಕಲಬುರಗಿ, (ಮಾರ್ಚ್ 26): ವ್ಯಕ್ತಿಯೋರ್ವ, ಪತ್ನಿಯ ಕತ್ತು ಕೊಯ್ದು ಬಳಿಕ ಆಕೆ ಮೇಲೆ ಕಾರು ಹಾಯಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (ಕಲಬುರಗಿ) ಜಿಲ್ಲೆಯ ಅಫಜಲಪುರ (ಅಫಜಲಪುರ) ತಾಲೂಕಿನ ಬಳೂರಗಿ ಗ್ರಾಮದ ಬಳಿ ನಡೆದಿದೆ. ಶೈಲಾ (28), ಪತಿಯಿಂದಲೇ ಬರ್ಬರವಾಗಿ ಹತ್ಯೆಯಾದ ಮಹಿಳೆ. ಅಕ್ಷಯ್ ಕೊಲೆ ಮಾಡಿದ ಆರೋಪಿ. 28 ವರ್ಷದ ಮಹಿಳೆಯನ್ನ ಕಾರಿನಲ್ಲಿ ಕರೆತಂದು ರಸ್ತೆ ಪಕ್ಕದಲ್ಲಿರುವ ಹೊಲದಲ್ಲಿ ನಿಲ್ಲಿಸಿ ಕುಡುಗೋಲಿನಿಂದ ಆಕೆಯ ಕತ್ತನ್ನು ಕೂಯ್ದಿದ್ದಾನೆ. ಬಳಿಕ ರಕ್ತದ ಮಡುವಿನಲ್ಲಿ ತಪ್ಪಿಸಿಕೊಳ್ಳಲು ಜಮೀನಿನಲ್ಲಿ ಓಡಿ ಹೋಗಿದ್ದಾಳೆ. ಆದರೂ ಬಿಡಿದ ಪಾಪಿ ಪತಿ ಆಕೆ ಮೇಲೆ ಕಾರು ಹಾಯಿಸಿ ಭೀಕರವಾಗಿ ಕೊಂದಿದ್ದಾನೆ. ಪತಿಯ ಪೈಶಾಚಿಕ ಕೃತ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎದೆ ಝಲ್ ಎನ್ನಿಸುವಂತಿದೆ.
ಅನೈತಿಕ ಸಂಬಂಧವೇ ಕೊಲೆಗೆ ಕಾರಣನಾ?
ಅಕ್ಷಯ್, ಶೈಲಾ ಮಹಾರಾಷ್ಟ್ರ ಮೂಲದವರಾಗಿದ್ದಾರೆ. ಪತ್ನಿಯ ಅನೈತಿಕ ಸಂಬಂಧಕ್ಕೆ ರೊಚ್ಚಿಗೆದ್ದು ಅಕ್ಷಯ್, ಶೈಲಾಳನ್ನ ಕೊಲೆ ಮಾಡಿದ್ದ ಪಕ್ಕಾ ಪ್ಲ್ಯಾನ್. ಅದರಂತೆ ಗಾಣಗಾಪುರಕ್ಕೆ ಹೋಗೋಣ ಬಾ ಅಂತ ತಂದೆ ತಾಯಿ ಸಮೇತ ಪತ್ನಿಯನ್ನು ಕರೆದುಕೊಂಡು ಹೋಗಿದ್ದಾನೆ. ಬಳಿಕ ಮಾರ್ಗ ಮಧ್ಯೆ ಕಾರು ನಿಲ್ಲಿಸಿ ಪತ್ನಿಯನ್ನು ಹೊರಗೆ ಎಳೆದು ತನ್ನ ತಂದೆ ತಾಯಿ ಸಮ್ಮುಖದಲ್ಲೇ ಆಕೆಯ ಕುತ್ತಿಗೆಯನ್ನು ಕೊಯ್ದಿದ್ದಾನೆ. ಬಳಿಕ ಶೈಲಾ ಪ್ರಾಣ ಉಳಿಸಿಕೊಳ್ಳಲು ರಕ್ತಸಿಕ್ತದಲ್ಲೇ ಜಮೀನಿನಲ್ಲಿ ಓಡಿ ಹೋಗಿದ್ದಾಳೆ. ಆದರೂ ಬಿಡಿದ ಹಂತಕ ಪತಿ ಕಾರಿನಿಂದ ಗುದ್ದಿ ಬಳಿಕ ಆಕೆಯ ಮೇಲೆ ಹಾಯಿಸಿ ಕೊಂದಿದ್ದಾನೆ.
ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಲು ಬಂದ ಅಕ್ಕ, ತಮ್ಮನ ಕೊಲೆ: 16 ವರ್ಷದ ಬಾಲಕನಿಂದ ಕೃತ್ಯ
ಕೊಲೆ ಮಾಡುವ ದೃಶ್ಯ ಮೊಬೈಲ್ ನಲ್ಲಿ ಸೆರೆ
ಮಹಿಳೆಯನ್ನ ಕೊಲೆ ಮಾಡುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಹತ್ಯೆಗೈಯ್ಯುತ್ತಿರುವ ಘೋರ ದೃಶ್ಯವನ್ನು ಜನ ನೋಡುತ್ತಲೇ ನಿಂತಿದ್ದರು. ಆದರೆ ಆಕೆಯನ್ನು ಕಾಪಾಡದ ಸ್ಥಿತಿಯಲ್ಲಿ ಎಲ್ಲರೂ ಗಾಬರಿಯಾಗಿದ್ದರು. ಇನ್ನು ಕೆಲವು ಹಂತಕನ ಮೇಲೆ ಕಲ್ಲುಗಳನ್ನು ಎಸೆದು ಆಕೆಯ ಪ್ರಾಣವನ್ನು ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಪ್ರಯೋಜನವಾಗಿಲ್ಲ. ಕೊಲೆಯ ಸ್ಥಳೀಯರೊಬ್ಬರ ಮೊಬೈಲ್ನಲ್ಲಿ ಸೆರೆ ಹಿಡಿದಿರುವ ದೃಶ್ಯ, ಎದೆಯ ಝಲ್ ಎನ್ನಿಸುವಂತಿದೆ.
ಸ್ಥಳಕ್ಕೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ, ಪರಿಶೀಲನೆ ನಡೆಸಿದ್ದು, ಸದ್ಯ ಶೈಲಾ ಪತಿ ಹಂತಕ ಅಕ್ಷಯ್ ಹಾಗೂ ಆತನ ತಂದೆ ತಾಯಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಅಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ ಎಸ್ಪಿ ಹೇಳಿದ್ದೇನು?
ಈ ಬಗ್ಗೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಹೇಳಿಕೆ ನೀಡಿದ್ದು, ಇಂದು (ಮಾರ್ಚ್ 26) ಬೆಳಗ್ಗೆ 11 ಗಂಟೆ ಸುಮಾರಿಗೆ ಕೊಲೆ ನಡೆದಿದೆ. ಕೊಲೆ ಮಾಡೋದನ್ನ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಗಾಣಗಾಪುರಕ್ಕೆ ಹೋಗೋಣ ಅಂತ ಒಟ್ನಿಯನ್ನ ಕರೆತಂದಿದ್ದಾರೆ. ಅಲ್ಲಿಗೆ ಹೋಗುವ ಮಾರ್ಗ ಮಧ್ಯ ಕೊಲೆ ಮಾಡಿದೆ. ಸದ್ಯ ಮೂವರನ್ನ ವಶಕ್ಕೆ ಪಡೆದಿದ್ದೆ. ಮೂವರು ಮಹಾರಾಷ್ಟ್ರದ ಬಾರಮತಿ ಜಿಲ್ಲೆಯವರು. ಮದುವೆಯಾಗಿ ನಾಲ್ಕು ವರ್ಷ ಆಗುತ್ತಿದೆ. ಪತ್ನಿಯ ಅನೈತಿಕ ಸಂಬಂಧದ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದೆವೆ’ ಎಂದು ಹೇಳಿದರು.