WITT Summit 2026: ಬಂಗಾಳದಲ್ಲಿ ಡಬಲ್ ಎಂಜಿನ್ ಸರ್ಕಾರ ರಚನೆ ಖಚಿತ; WITT ಶೃಂಗಸಭೆಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಭವಿಷ್ಯ

WITT Summit 2026: ಬಂಗಾಳದಲ್ಲಿ ಡಬಲ್ ಎಂಜಿನ್ ಸರ್ಕಾರ ರಚನೆ ಖಚಿತ; WITT ಶೃಂಗಸಭೆಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಭವಿಷ್ಯ


WITT ಶೃಂಗಸಭೆ 2026: ಬಂಗಾಳದಲ್ಲಿ ಡಬಲ್ ಇಂಜಿನ್ ಸರ್ಕಾರದ ರಚನೆ ಖಚಿತ; WITT ಶೃಂಗಸಭೆಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಭವಿಷ್ಯ

ಹೊಸದಿಲ್ಲಿ, ಮಾರ್ಚ್ 24: TV9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026’ (WITT ಶೃಂಗಸಭೆ 2026)ಯಲ್ಲಿ ಮಾತನಾಡಿದ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ, ಮುಂದಿನ ತಿಂಗಳು 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿವೆ. ಬಂಗಾಳದಲ್ಲಿ ಮತ್ತೆ ಟಿಎಂಸಿ ಸರ್ಕಾರಕ್ಕೆ ಅಧಿಕಾರಕ್ಕೆ ಬರುವುದಿಲ್ಲ. ಅಲ್ಲಿನ ಜನರು ಬೇಸತ್ತಿದ್ದಾರೆ. ಕೊಲೆಗಳು ಬಹಿರಂಗವಾಗಿ ನಡೆಯುತ್ತಿವೆ. ಬಂಗಾಳವು ಪ್ರತಿಯೊಂದು ಕ್ಷೇತ್ರದಲ್ಲೂ ಹಿಂದುಳಿದಿದೆ. ಅಲ್ಲಿನ ಜನರು ಡಬಲ್ ಎಂಜಿನ್ ಅನ್ನು ಬಯಸುತ್ತಿದ್ದಾರೆ. ಅಲ್ಲಿ ಈ ಬಾರಿ ಬಿಜೆಪಿ ಸರ್ಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ತಮಿಳುನಾಡಿನಲ್ಲೂ ಇದೇ ಪರಿಸ್ಥಿತಿ. ಐದು ವರ್ಷಿಗೊಮ್ಮೆ ಅಲ್ಲಿ ಸರ್ಕಾರ ಬದಲಾಗುತ್ತದೆ. ಡಿಎಂಕೆ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದೆ. ಅಲ್ಲಿ ಸ್ವಜನಪಕ್ಷಪಾತವಿದೆ. ಅಲ್ಲಿಯೂ ಬಿಜೆಪಿ ಸರ್ಕಾರಕ್ಕೆ ಬರಲಿದೆ. ಕೇರಳದಲ್ಲಿ ನಾವು ನಮ್ಮ ಸ್ಥಾನವನ್ನು ಸುಧಾರಿಸುತ್ತೇವೆ. ಪುದುಚೇರಿ ಮತ್ತು ಅಸ್ಸಾಂನಲ್ಲಿಯೂ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕಿಶನ್ ರೆಡ್ಡಿ ವಿಶ್ವಾಸ ಹೊಂದಿದ್ದಾರೆ.

ಇದನ್ನೂ ಓದಿ: WITT ಶೃಂಗಸಭೆ 2026 ರಲ್ಲಿ ಪ್ರಧಾನಿ ಮೋದಿ: ನಾವು ಭಾರತೀಯರ ಪರ, ನಮಗೆ ಅಭಿವೃದ್ಧಿಯೇ ಮುಖ್ಯ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ಭಾರತದ ಇಂಧನ ವಲಯವು ಪ್ರಸ್ತುತ ಕಠಿಣ ಪರಿಸ್ಥಿತಿಗಳನ್ನು ಎದುರಿಸುತ್ತಿದೆ. ಮೋದಿ ಸರ್ಕಾರದ ಎಲ್ಲಾ ವಲಯಗಳಲ್ಲಿ ಸ್ವಾವಲಂಬನೆ ಸಾಧಿಸಲು ಪ್ರಯತ್ನಗಳು ನಡೆಯುತ್ತಿವೆ. 2014ಕ್ಕಿಂತ ಮೊದಲು ಕಲ್ಲಿದ್ದಲಿನ ಪೂರೈಕೆಯಲ್ಲಿ ಸಮಸ್ಯೆಗಳಿದ್ದವು. ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಕಲ್ಲಿದ್ದಲು ಹಂಚಿಕೆಯ ಬಗ್ಗೆ ಯಾವುದೇ ಆರೋಪಗಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ: WITT ಶೃಂಗಸಭೆಯಲ್ಲಿ ಪ್ರಧಾನಿ ಮೋದಿ 2026: ಕಾಂಗ್ರೆಸ್‌ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ಓವೈಸಿಗೆ ತಿರುಗೇಟು:

ಭಾರತದಲ್ಲಿ ಇದನ್ನು ಆಚರಿಸಲು ಸ್ವಾತಂತ್ರ್ಯವಿಲ್ಲ ಎಂಬ ಓವೈಸಿ ಅವರಿಗೆ ಹೇಳಿಕೆ ನೀಡಿದ ಸಚಿವ ಕಿಶನ್ ರೆಡ್ಡಿ, “ಇದು ಸಂಪೂರ್ಣವಾಗಿ ತಪ್ಪು. ಸ್ವಾತಂತ್ರ್ಯವಿಲ್ಲದೆ ಇರುವುದಕ್ಕೆ ಇದು ಪಾಕಿಸ್ತಾನವೇ? ಇಲ್ಲಿ ಎಲ್ಲರೂ ಸ್ವತಂತ್ರರು. ಇಲ್ಲಿ ಯಾವುದೇ ಧರ್ಮದ ಸಮಸ್ಯೆ ಇಲ್ಲ. ಓವೈಸಿ ಇದನ್ನು ಅರ್ಥ ಮಾಡಿಕೊಳ್ಳಬೇಕು. ಆದರೆ ಈ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಬಾರದು” ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *