
ಬೆಂಗಳೂರು, (ಮಾರ್ಚ್ 07): ಸಚಿವ ಕೆಹೆಚ್ ಮುನಿಯಪ್ಪ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಉಚಿತ ಸೀರೆ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದು ನಾರಿ ಮಣಿಯರನ್ನ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜಿನ ಮೈದಾನದಲ್ಲಿ ನಡೆದಿದ್ದ ಹುಟ್ಟು ಹಬ್ಬಕ್ಕೆ ಬಂದ ಮಹಿಳೆಯರಿಗಾಗಿ ಟೆಂಪೋದಲ್ಲಿ ಅಭಿಮಾನಿಗಳು ಸೀರೆಗಳನ್ನು ತಂದಿದ್ದರು. ಇದನ್ನು ನೋಡಿದ ಮಹಿಳೆಯರು ಸೀರೆಗಳನ್ನ ಪಡೆಯವುದಕ್ಕೆ ಕ್ಯೂ ನಲ್ಲು ಮುಗಿದಿದ್ದು, ನೂಕುನುಗ್ಗಲು ಮಾಡಿದ್ದಾರೆ. ಇದರಿಂದ ಹೈರಾಣಾದರು.