ಗುರುವಾರ ವಡೋದರಾದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಆವೃತ್ತಿಯ ಫೈನಲ್ ಬಾಲಕಿಯ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಜಯ ಸಾಧಿಸಿತು. ತಂಡವನ್ನು ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಬಳಿಕ ಪಂದ್ಯ ಪ್ರಸ್ತುತಿಯಲ್ಲಿ ಮಾತನಾಡಿದ ಆರ್ಸಿಬಿ ನಾಯಕಿ ಸ್ಮೃತಿ ಮಂಧಾನ ಡಬ್ಲ್ಯುಪಿಎಲ್ ಟ್ರೋಫಿಯನ್ನು ದೇವರಿಗೆ ಅರ್ಪಿಸಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಮ್ಮ ಅಭಿಮಾನಿಗಳ ಬಗ್ಗೆ ತುಂಬಾ ಹೆಮ್ಮೆಪಡುತ್ತದೆ. ಆರ್ಸಿಬಿ ಅಭಿಮಾನಿಗಳು ವಿಶ್ವದಲ್ಲೇ ಅತ್ಯುತ್ತಮ ಅಭಿಮಾನಿಗಳು, ಅವರು ತಂಡವನ್ನು ಬೆಂಬಲಿಸುತ್ತಾರೆ. ಫೈನಲ್ ಪಂದ್ಯಕ್ಕೆ ಭಾರಿ ಸಂಖ್ಯೆಯಲ್ಲಿ ಬಂದು ತಂಡವನ್ನು ಹುರಿದುಂಬಿಸಿದ ಆರ್ ಸಿಬಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸುತ್ತೇನೆ. ಈ ಟ್ರೋಫಿ ನಿಮ್ಮದು. ನಾನು 2024 ರಲ್ಲಿ ‘ಈ ಸಲ ಕಪ್ ನಮ್ದು’ ಎಂದು ಹೇಳಿದ್ದೆ. ಈ ಬಾರಿ ಮತ್ತೊಮ್ಮೆ ಹೇಳಲು ಬಯಸುತ್ತೇನೆ ‘ಈ ಸಲ ಕಪ್ ನಮ್ದು 2’ ಸ್ಮೃತಿ ಅವರ ಈ ಮಾತಿಗೆ ಅಭಿಮಾನಿಗಳು ಕೂಡ ಹುಚ್ಚೆದ್ದು ಸಂಭ್ರಮಿಸಿದರು.
ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ