
ಈ ವಿಚಾರ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್ ಅವರು ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದರು. ತನಿಖಾ ವರದಿಯಲ್ಲಿ ಪಿಎಸ್ಐ ನಾಗರಾಜ್ ಅವರು ಭೂಮಾಫಿಯಾ ಮತ್ತು ರೌಡಿ ಚಟುವಟಿಕೆಗಳಲ್ಲಿ ತೊಡಗಿರುವವರೊಂದಿಗೆ ಅನಗತ್ಯ ಸ್ನೇಹ ಮತ್ತು ಸಂಪರ್ಕ ಹೊಂದಿರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಪೂರ್ವ ವಲಯದ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.