ಧಾರವಾಡ, (ಏಪ್ರಿಲ್ 17): ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿ ಅಪರಾಧಿಗಳಿಗೆ ಜನಪ್ರತಿನಿಧಿಗಳ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿದೆ 2016ರ ಜೂನ್ನಲ್ಲಿ ನಡೆದ ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ವರ್ಷಗಳ ಕಾಲ ವಿಚಾರಣೆ ನಡೆಸಿದ ಬಳಿಕ ಇಂದು (ಏಪ್ರಿಲ್ 17) ಅಪರಾಧಿಗಳಿಗೆ ಶಿಕ್ಷೆಯಾಗಿದೆ.
ಅಪರಾಧಿಗಳಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಯೋಗೇಶ್ ಗೌಡ ಹತ್ಯೆ ಪ್ರಕರಣದ ಹೋರಾಟಗಾರ ಬಸವರಾಜ ಕೊರವರ್, ಮಾಧ್ಯಮಗಳ ಜೊತೆ ಮಾತನಾಡಿ ಸಂತಸ ಪಡುತ್ತಾರೆ. ಕೆಲವೊಂದಿಷ್ಟು ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದು, ಏನೆಲ್ಲಾ ಹೇಳುತ್ತಿರುವುದನ್ನು ಕೇಳಿ.