
<p>ಬೆಂಗಳೂರಿನ ಬಸವೇಶ್ವರ ನಗರದಲ್ಲಿ, ತನ್ನ ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದಕ್ಕೆ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.</p><img><p>19 ವರ್ಷದ ಮಗಳೊಂದಿಗೆ ಜೀವನ ನಡೆಸುತ್ತಿದ್ದ ಮಹಿಳೆ ಗೀತಾ ಎಂಬವರಿಗೆ ಮುತ್ತು ಎಂಬಾತ ಪರಿಚಯವಾಗಿದ್ದನು. ಮೂವರು ಒಂದೇ ಮನೆಯಲ್ಲಿದ್ದರು. ಮೂವರಿಗೂ ಒಳ್ಳೆಯ ಪರಿಚಯವಿತ್ತು.</p><img><p>ಮೂವರು ಬೆಂಗಳೂರಿನ ಬಸವೇಶ್ವರ ನಗರದ ಸಾಣೆಗುರುವನಹಳ್ಳಿಯಲ್ಲಿ ವಾಸವಾಗಿದ್ದರು. ಗೀತಾ ಪ್ರಾವಿಷನ್ ಸ್ಟೋರ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಮುತ್ತು ಸಹ ಅದೇ ಏರಿಯಾದಲ್ಲಿ ಟೀ ಸ್ಟಾಲ್ ಇಟ್ಕೊಂಡಿದ್ದನು. ವ್ಯಾಪಾರಿಗಳಾಗಿದ್ದರಿಂದ ಮುತ್ತು ಮತ್ತು ಗೀತಾ ನಡುವೆ ಪರಿಚಯವಿತ್ತು.</p><img><p>ಗೀತಾ ಅವರಿಗೆ ನಿಮ್ಮ ಮಗಳನ್ನು ನನಗೆ ಕೊಟ್ಟು ಮದುವೆ ಮಾಡಿಕೊಡಿ ಎಂದು ಮುತ್ತು ಪದೇ ಪದೇ ಪೀಡಿಸುತ್ತಿದ್ದನು. ಆದ್ರೆ ಗೀತಾ ಈ ಮದುವೆಗೆ ಒಪ್ಪಿಗೆ ನೀಡಿರಲಿಲ್ಲ. ಗೀತಾ ಒಪ್ಪದಿದ್ದಾಗ ಮದುವೆ ಮಾಡಿಸುವಂತೆ ಮುತ್ತು ಒತ್ತಡ ಹಾಕುತ್ತಿದ್ದನು.</p><img><p>ಮದುವೆಗೆ ಒಪ್ಪದಿದ್ದಾಗ ಕೋಪಗೊಂಡ ಮುತ್ತು, ಮಧ್ಯರಾತ್ರಿ 1 ಗಂಟೆಗೆ ಗೀತಾ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ನಂತರ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಕೂಡಲೇ ಗೀತಾ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.</p><p><strong>ಇದನ್ನೂ ಓದಿ: </strong><strong>ಯಾದಗಿರಿಯಲ್ಲಿ ಅಭಿವೃದ್ಧಿ ಹೆಸರಲ್ಲಿ ಹಣ ದುರ್ಬಳಕೆ? Smart TVಗೆ ₹2 ಲಕ್ಷ, ಟಾಯ್ಲೆಟ್ ಕುಡ್ಡಿಗೆ ₹5 ಲಕ್ಷ!</strong></p><img><p>ಗೀತಾ ಅವರ ದೇಹ ಶೇ.50ರಷ್ಟು ಬೆಂಕಿಗಾಹುತಿಯಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಈ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.</p><p><strong>ಇದನ್ನೂ ಓದಿ: </strong><strong>ಬೆಂಗಳೂರೇ ಬೆಚ್ಚಿ ಬೀಳಿಸುವಂತ ದೃಶ್ಯ : ನಡುರಸ್ತೆಯಲೇ ಯುವತಿಗೆ ಲೈಂ*ಗಿಕ ದೌರ್ಜನ್ಯ</strong></p>
Source link
ಮದುವೆ ನಿರಾಕರಣೆ: ಯುವತಿ ತಾಯಿಯ ಜೀವಕ್ಕೆ ಕುತ್ತು ತಂದ ದುರುಳ!