Headlines

ದಾವಣಗೆರೆ ಬೈ ಎಲೆಕ್ಷನ್​​: ಅಸಮಾಧಾನದ ಆರೋಪಕ್ಕೆ ಸಚಿವ ಜಮೀರ್​​ ಫಸ್ಟ್​​ ರಿಯಾಕ್ಷನ್​​

ದಾವಣಗೆರೆ ಬೈ ಎಲೆಕ್ಷನ್​​: ಅಸಮಾಧಾನದ ಆರೋಪಕ್ಕೆ ಸಚಿವ ಜಮೀರ್​​ ಫಸ್ಟ್​​ ರಿಯಾಕ್ಷನ್​​


ದಾವಣಗೆರೆ ಬೈ ಎಲೆಕ್ಷನ್: ಅಸಮಾಧಾನದ ಆರೋಪಕ್ಕೆ ಸಚಿವ ಜಮೀರ್ ಫಸ್ಟ್ ರಿಯಾಕ್ಷನ್

ಹುಬ್ಬಳ್ಳಿ, ಏಪ್ರಿಲ್ 05: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಖಾಡಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಕೊನೆಗೂ ಅಧಿಕೃತವಾಗಿ ಎಂಟ್ರಿ ನೀಡುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯಲ್ಲಿ ಟಿವಿ9ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ತಾವು ಚುನಾವಣಾ ಪ್ರಚಾರದಿಂದ ದೂರ ಉಳಿದಿರುವ ಆರೋಪ ಹಾಗೂ ಟಿಕೆಟ್ ವಿಚಾರದಲ್ಲಿನ ಅಸಮಾಧಾನದ ಬಗ್ಗೆ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡಲಾಗಿದೆ. ದಾವಣಗೆರೆ ದಕ್ಷಿಣ ಟಿಕೆಟ್‌ಗಾಗಿ ತಾವು ಯಾವುದೇ ಲಾಬಿ ನಡೆಸಿಲ್ಲ. 2023ರ ವಿಧಾನಸಭಾ ಚುನಾವಣೆ ವೇಳೆ, ಶಾಮನೂರು ಶಿವಶಂಕರಪ್ಪನವರು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ, ತಾವೇ ಗೆಲ್ಲಿಸಿಕೊಂಡು ಬರುವುದಾಗಿ ಭರವಸೆ ನೀಡಿದ್ದರು. ಆದರೆ, ಪಕ್ಷದ ಹೈಕಮಾಂಡ್ ಕುಟುಂಬಕ್ಕೆ ಟಿಕೆಟ್ ನೀಡುವ ಸಂಪ್ರದಾಯದಂತೆ ಶಾಮನೂರು ಕುಟುಂಬದ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಪಕ್ಷ ಹೈಕಮಾಂಡ್ ನಿರ್ಧಾರ ನಡೆಯುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *